Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಗೆ ಸಿಗದ ಗ್ರೀನ್ ಸಿಗ್ನಲ್ : ಪ್ರೇಯಸಿಯ ದುಪಟ್ಟಾದಲ್ಲೇ ನೇಣು ಬಿಗಿದುಕೊಂಡ ಯುವಕ

Advertisement
ಉತ್ತರ ಪ್ರದೇಶ : ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುವೆಗೆ  ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕುರ್ದಿಖೇಡ ಗ್ರಾಮದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಸಮ್ರೇಜ್ ಎಂದು ಗುರುತಿಸಲಾಗಿದೆ. ಈತ ಹಮೀದ್ ಅಲಿಯಾಸ್ ಭೂರಾ ಎಂಬವರ ಪುತ್ರನಾಗಿದ್ದು, ಈತ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ಸ್ಥಳೀಯ ನಿವಾಸಿಯಾಗಿದ್ದಾನೆ. ಸಮ್ರೇಜ್ ಮೃತದೇಹ ಮರದಲ್ಲಿ ನೇತಾಡುತ್ತಿತ್ತು.

ಈ ಘಟನೆ ಸುತ್ತ ವಿಡಿಯೋವೊಂದು ಹರಿದಾಡಿದ್ದು, ಯುವತಿ ಆತನನ್ನು ತಬ್ಬಿ ಅಳುತ್ತಿರುವುದನ್ನು ಕಾಣಬಹುದು. ದಲಿತ ಸಮುದಾಯದ ಹುಡುಗಿಯೊಂದಿಗೆ ಸಮ್ರೇಜ್ ದೀರ್ಘಕಾಲದ ಸಂಬಂಧದಲ್ಲಿದ್ದ. ಅವರ ಅಂತರ್ಧರ್ಮೀಯ ಸಂಬಂಧವನ್ನು ಎರಡೂ ಕುಟುಂಬಗಳು ನಿರಾಕರಿಸಿದ್ದವು. ಹುಡುಗಿ ಇತ್ತೀಚೆಗೆ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ ವಿಷಯ ಉಲ್ಬಣಗೊಂಡಿತ್ತು.

ಕೆಯಿಂದ ದೂರ ಹೋಗಿರುವುದು ಮತ್ತು ಕುಟುಂಬದ ಒತ್ತಡದಿಂದ ಮನನೊಂದ ಸಮ್ರೇಜ್ ತಡರಾತ್ರಿ ಆಕೆಗೆ ಮನೆಯಿಂದ ಹೊರಬರಲು ಹೇಳಿದ್ದ, ಇಬ್ಬರೂ ಕಾಡಿನ ದಾರಿ ಹಿಡಿದರು. ಇಬ್ಬರೂ ಮಾತನಾಡುತ್ತಿರುವಾಗ ವಾಗ್ವಾದ ತೀವ್ರವಾಗಿ ಕೋಪದಲ್ಲಿ ಆತ ಪ್ರೇಯಸಿಯ ದುಪಟ್ಟಾವನ್ನು ಎಳೆದುಕೊಂಡು ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವನ್ನು ನೋಡಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಮ್ರೇಜ್ ಅವರ ಮೊಬೈಲ್ ಫೋನ್ ಮತ್ತು ಮೋಟಾರ್ ಸೈಕಲ್ ಅನ್ನು ಸ್ಥಳದಿಂದ ವಶಪಡಿಸಿಕೊಂಡರು. ತನಿಖೆಯ ಭಾಗವಾಗಿ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪರಿಸ್ಥಿತಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಹಲವು ಮಂದಿ ಕಾರಣೀಭೂತರಾಗಿದ್ದಾರೆ, ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನು ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ