ಬಸವನಬಾಗೇವಾಡಿ: ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿ "ಗೃಹಲಕ್ಷ್ಮಿ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಗುರುವಾರ ಬೆಳಿಗ್ಗೆ ಆಯೋಜಿಸಲಾಗಿತ್ತು.
ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಮುಟ್ಟಿಸುವಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಶಿಶು ಅಭಿವೃದ್ಧಿ ಅಧಿಕಾರಿ ಶಿಲ್ಪಾ ಹಿರೇಮಠ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮೈಬೂಬ ನಾಯ್ಕೋಡಿ, ಮುಖಂಡರಾದ ಸಂಗಮೇಶ ಕೋಲಕಾರ,ರುಕ್ಮಿಣಿ ರಾಠೋಡ, ರವಿ ರಾಠೋಡ ಸೇರಿದಂತೆ ಅನೇಕರು ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಾಯ್. ಎಸ್ ಸೋಮನಕಟ್ಟಿ, ಪುರಸಭೆ ಅಧಿಕಾರಿ ಶಬ್ಬೀರ ರೇವೂರಕರ, ವೀರೇಶ ಸರಶೆಟ್ಟಿ ಮುಖಂಡರಾದ ಸುರೇಶ ಹಾರಿವಾಳ, ಮೈಬೂಬ ನಾಯ್ಕೋಡಿ, ಆನಂದ ಜಾಧವ, ಸುರೇಶ ಪಾಟೀಲ, ಸಂಗಯ್ಯ ಕಾಳಹಸ್ತೇಶ್ವರಮಠ, ಸೇರಿದಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು,ಅಧಿಕಾರಿಗಳು,ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನ ಪ್ರತಿನಿಧಿಗಳು ಹಾಜರಿದ್ದರು. ನಂತರ ಸಮಿತಿ ಸಭೆ ಜರುಗಿತು. ವರದಿ : ಗುರುರಾಜ ಕನ್ನೂರ


