ಬೆಂಗಳೂರು: ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ.
ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.
ಇದೇ ವೇಳೆ ಎ.ಎಸ್. ಪೊನ್ನಣ್ಣ ಅವರನ್ನು ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.
ಪೊನ್ನಣ್ಣ ಅವರು ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.
ವಿಧಾನ ಪರಿಷತ್ನಲ್ಲೂ ಮಹತ್ವದ ಬದಲಾವಣೆ ನಡೆದಿದ್ದು, ಸಲೀಂ ಅಹ್ಮದ್ ಅವರನ್ನು ಸಭಾಪತಿಯಾಗಿ ಹಾಗೂ ನಟಿ-ರಾಜಕಾರಣಿ ಉಮಾಶ್ರೀ ಅವರನ್ನು ಪರಿಷತ್ ಉಪಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.
ವಿಧಾನಸಭೆ ಸ್ಪೀಕರ್: ಜಿ.ಎಸ್. ಪಾಟೀಲ್
ವಿಧಾನಸಭೆ ಡೆಪ್ಯೂಟಿ ಸ್ಪೀಕರ್: ಎ.ಎಸ್. ಪೊನ್ನಣ್ಣ
ವಿಧಾನ ಪರಿಷತ್ ಸಭಾಪತಿ: ಸಲೀಂ ಅಹ್ಮದ್
ವಿಧಾನ ಪರಿಷತ್ ಉಪಸಭಾಪತಿ: ಉಮಾಶ್ರೀ


