LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗ್ಯಾರಂಟಿ ಯೋಜನೆ ಜನರ ಮನೆ ಬಾಗಿಲಿಗೆ ತಲುಪಿಸಬೇಕು :ಎನ್ ವೈ ಪಿ ಚೇತನ್

Advertisement
ಮೊಳಕಾಲ್ಮೂರು :ಕಾಂಗ್ರೆಸ್ ಸರ್ಕಾರವು ನೀಡಿದ ಪಂಚ ಗ್ಯಾರಂಟಿ ಯೋಜನಯನ್ನು ರಾಜ್ಯದ ಪ್ರತಿ ವ್ಯಕ್ತಿಗೆ ಮುಟ್ಟಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ಎನ್ ವೈ ಪಿ ಚೇತನ್ ರವರು ತಾಲೂಕಿನ ತಮ್ಮೆನಹಳ್ಳಿ ಗ್ರಾಮದಲ್ಲಿ ಇಂದು ನಡೆದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಉದ್ಘಾಟನೆ ಮಾಡಿ ಇವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬ ಜನತೆಯು ಬಳಸಿಕೊಂಡರೆ ಉತ್ತಮ . ಇಂದು ಅನೇಕ ಕಡು ಬಡ ಜನರಿಗೆ ಈ ಪಂಚ ಗ್ಯಾರಂಟಿ ಯೋಜನೆಯಿಂದಆರ್ಥಿಕವಾಗಿ ಬೆಳೆಯಲು ದಾರಿ ಮಾಡಿ ಕೊಟ್ಟಿದೆ. ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುವ ಸಂದರ್ಭದಲ್ಲಿ ಯಾವುದೇ ಲೋಪ ದೋಷ ಕಂಡು ಬಂದಲ್ಲಿ ಅಧಿಕಾರಿಗಳಿಗೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳಿಗೆ ಪರಿಸ್ಕಾರ ಪಡೆಯಬೇಕು ಎಂದು ತಿಳಿಸಿದರು.



ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ವ್ಯವಸ್ಥಾಪಕರು ನಂದೀಶ್ ಮಾತನಾಡಿ ಭಾರತ ದೇಶದಲ್ಲಿ ಕರ್ನಾಟಕ ಸರ್ಕಾರ ನೀಡಿದ ಈ ಪಂಚ ಯೋಜನೆಗಳು ಪ್ರಥಮ ಎನ್ನುತ್ತೇವೆ. ಇಂತಹ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಬಳಸಿ ಕೊಳ್ಳಬೇಕು. ಗ್ಯಾರಂಟಿ ಯೋಜನೆ ಪಡೆಯುವಲ್ಲಿ ಯಾವುದೇ ಲೋಪ ದೋಷ ಕಂಡು ಬಂದಲ್ಲಿ ನಿಮ್ಮ ಊರುಗಳಿಗೆ ನಮ್ಮ ಪಂಚ ಗ್ಯಾರಂಟಿ ಯೋಜನೆಯ ಅಧಿಕಾರಿಗಳು ಬಂದಿರುತ್ತಾರೆ, ಇವರ ಮಾರ್ಗದರ್ಶನ ದಲ್ಲಿ ಸರ್ಕಾರ ನೀಡಿದ ಯುವ ನಿಧಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನಗಳು ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.



ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ತಮ್ಮೆನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು ಪಾರ್ವತಮ್ಮ ವೀರಣ್ಣ, ಸಿ ಡಿ ಪಿ ಓ ವಿನಯ್ ಕುಮಾರ್, ಆಹಾರ ಇಲಾಖೆ ಗೀತಾoಜಲಿ, ಯುವ ನಿಧಿ ಯೋಜನೆ ಅಧಿಕಾರಿ ಬಸವರಾಜ್, ಬೆಸ್ಕಾಂ ಆಧಿಕಾರಿ ಹನುಮಂತರೆಡ್ಡಿ, ತಾಲ್ಲೂಕಿನ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರು ಧನಂಜಯ, ಗ್ಯಾರಂಟಿ ಯೋಜನೆ ಸದಸ್ಯರುಗಳಾದ ನರಸಿಂಹ ರೆಡ್ಡಿ, ಇಸ್ಮಾಯಿಲ್, ಹೊನ್ನೂರಪ್ಪ ಗೋವಿಂದಪ್ಪ, ಹನುಮಂತರೆಡ್ಡಿ, ಸಿದ್ದಬಸಣ್ಣ, ಶಿವರುದ್ರಪ್ಪ ಈಶ್ವರಪ್ಪ, ಗ್ರಾಮ ಪಂಚಾಯತಿಸದಸ್ಯರುಗಳಾದ ಗೀತಾ ಹನುಮಕ್ಕ, ಉಮಾ ರೆಡ್ಡಿ, ಪೆನ್ನಯ್ಯ, ಪಿ ಡಿ ಓ ಗಳಾದ ಬಾಂಡ್ರವಪ್ಪ ಗುಂಡಪ್ಪ, ಮಲ್ಲಿಕಾರ್ಜುನ, ಕುಮಾರ್ ಸ್ವಾಮಿ, ಯಶ್ವನಂಥಪ್ಪ, ನೂರುಲ್ಲ, ನಂದೀಶ್ ವ್ಯವಸ್ಥಾಪಕರು, ಜಗದೀಶ್, ಟಿ ಡಿ ವೀರಣ್ಣ, ಅಂಗನವಾಡಿ ಕಾರ್ಯಕರ್ತೆರು ಆಶಾ ಕಾರ್ಯಕರ್ತೆರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ: ಪಿಎಂ ಗಂಗಾಧರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ