LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಸದ್ಭಕ್ತಿಯಿಂದ ನಡೆದ ಗುರುಪೂರ್ಣಿಮೆ

Advertisement
ಚಿತ್ರದುರ್ಗ: ಇಂದು ಗುರು ಪೂರ್ಣಿಮೆಯ ಶುಭ ದಿನ. ಈ ದಿನವನ್ನು ಆಷಾಢ ಪೂರ್ಣಿಮಾವೆಂದೂ ಕರೆಯುತ್ತಾರೆ. ಯಾಕೆಂದರೆ, ಇದು ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಾಗಿದೆ. ಈ ಶುಭ ದಿನದಂದು ನಾವು ನಮ್ಮ ಹಿರಿಯರಿಗೆ,ಪಾಠ ಕಲಿಸಿದ ಗುರುಗಳಿಗೆ ಗೌರವವನ್ನು, ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಈ ಕಾರಣಕ್ಕಾಗಿ ಹಿಂದೂ ಧರ್ಮದಲ್ಲಿ ಗುರು ಪೂರ್ಣಿಮಾಕ್ಕೆ ವಿಶೇಷ ಮಹತ್ವವನ್ನು ನೀಡಲಾಗಿದೆ.

[video width="848" height="478" mp4="https://bharathvaibhav.com/wp-content/uploads/2025/07/WhatsApp-Video-2025-07-10-at-7.42.20-PM.mp4"][/video]

ಮೊಳಕಾಲ್ಮುರು ಪಟ್ಟಣದಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ಶಿರಡಿ ಸಾಯಿ ಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸದ್ಭಕ್ತಿಯಿಂದ ನಡೆದವು.

ಮುಂಜಾನೆಯಿಂದ ಸಾಯಿಬಾಬಾ ಮಂದಿರದಲ್ಲಿ ವಿವಿಧ ಪೂಜೆಗಳು ಆರಂಭಗೊಂಡವು. ಗುರು ಪೂರ್ಣಿಮೆಯ ಪ್ರಯುಕ್ತ ಶ್ರೀ ಸಾಯಿಬಾಬಾ ದೇವರನ್ನು ವಿಶೇಷವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು, ದೇವರಿಗೆ ಸಾಯಿ ಕಾಕಡ ಆರತಿ, ಭಕ್ತಾದಿಗಳ ಹಸ್ತದಿಂದ ಶ್ರೀ ಸಾಯಿ ಬಾಬಾ ವಿಗ್ರಹಕ್ಕೆ ಕ್ಷೀರಭಿಷೇಕ, ಶ್ರೀ ಸಾಯಿ ಸತ್ಯಾವ್ರತ ನಂತರ ಗುರು ಹಿರಿಯರಿಂದ ಆಶೀರ್ವಚನ, 108 ವಿಧದ ನೈವೇದ್ಯದೊಂದಿಗೆ ಮಧ್ಯಾಹ್ನ ಆರತಿ ತೀರ್ಥ ಪ್ರಸಾದ ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಹಾಗೂ ಸಂಧ್ಯ ಆರತಿ ಪ್ರಸಾದ ವಿನಿಯೋಗ,ಭಕ್ತಿಗೀತೆಗಳ ವಾಚನ,ಸಾಯಿ ಪಲ್ಲಕ್ಕಿ ಸೇವೆ, ಶೇಜಾ ಆರತಿ ಸೇವೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದವು. ವಿಶೇಷವಾಗಿ ಸಾಯಿ ರಥ ಮೆರವಣಿಗೆ ನೋಡುಗರ ಗಮನ ಸೆಳೆಯಿತು. ಮಹಿಳೆಯರು ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ವರದಿ: PM ಗಂಗಾಧರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ