Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೇಮಾವತಿ ಲಿಂಕ್ ಕೆನಾಲ್ ಹೋರಾಟ: ಎಂ.ಟಿ.ಕೃಷ್ಣಪ್ಪ ವಿರುದ್ಧ ಎಫ್.ಐ.ಆರ್.ಶಾಸಕರೊಂದಿಗೆ ಚರ್ಚಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Advertisement
ತುರುವೇಕೆರೆ: ಹೇಮಾವತಿ ಲಿಂಕ್ ಕೆನಾಲ್ ಹೋರಾಟದ ಕಾರಣ ತುರುವೇಕೆರೆ ಶಾಸಕರ ಮೇಲೆ ಎಫ್.ಐ.ಆರ್. ದಾಖಲಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರೊಂದಿಗೆ ದೂರವಾಣಿ ಮೂಲಕ ಹೋರಾಟದ ಪ್ರಗತಿ ಹಾಗೂ ಪ್ರಕರಣ ದಾಖಲಿಸಿರುವ ಬಗ್ಗೆ ಚರ್ಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಎಂ.ಟಿ.ಕೃಷ್ಣಪ್ಪನವರಿಗೆ ಕರೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಕೃಷ್ಣಪ್ಪನವರೇ ಎ1 ಆರೋಪಿಯನ್ನಾಗಿಸಿರುವ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಯಿಸಿದ ಎಂ.ಟಿ.ಕೃಷ್ಣಪ್ಪ, ಎ1 ಆರೋಪಿ ನಾನಾ..? ಮಾಡಲಿ ಬಿಡಣ್ಣ.. ರೈತಪರ ಹೋರಾಟ ಮಾಡುತ್ತಿದ್ದೇನೆ. ಸರ್ಕಾರ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ. ರೈತರಿಗಾಗಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ಜೈಲಿನಲ್ಲಿ ಮುದ್ದೆ ಊಟ ಕೊಡ್ತಾರೆ, ಊಟ ಮಾಡಣ್ಣ ಬಿಡಣ್ಣ ಎಂದರು. ಇದಲ್ಲದೆ ನೀವು ಯಾವುದೇ ಹೇಳಿಕೆ ನೀಡಬೇಡಿ ಎಂದ ಶಾಸಕರು, ನಿಖಿಲ್ ಕುಮಾರಸ್ವಾಮಿಗೂ ಈ ಬಗ್ಗೆ ಹೇಳಿಕೆ ನೀಡದಂತೆ ತಿಳಿಸಿದ್ದೇನೆ, ನೀವೊಮ್ಮೆ ಅವರಿಗೆ ಸೂಚಿಸಿ ಎಂದರು.

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯಿಂದಾಗಿ ತುಮಕೂರು ಜಿಲ್ಲೆಯ 28 ಲಕ್ಷ ರೈತರ ಬದುಕು ಸರ್ವನಾಶವಾಗುತ್ತದೆ. ಕುಡಿಯುವ ನೀರಿಗೂ ತತ್ವಾರ ಏರ್ಪಡಲಿದೆ. ಈ ಹಿನ್ನೆಲೆಯಲ್ಲಿ ಹೋರಾಟ ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ಕಾಮಗಾರಿ ಮುಂದುವರೆಸಲು ಬಿಡುವುದಿಲ್ಲ. ಜೈಲಿಗೆ ಹಾಕಿದರೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ಎಂ.ಟಿ.ಕೃಷ್ಣಪ್ಪ ಅವರ ರೈತಪರ ನಿಲುವಿಗೆ ಹಾಗೂ ರೈತರಿಗಾಗಿ ಜೈಲಿಗೆ ತೆರಳಲು ಸಿದ್ದವಿರುವ ಧೈರ್ಯ ಹಾಗೂ ಹೋರಾಟದ ಮನೋಭಾವದ ಬಗ್ಗೆ ಮೆಚ್ಚುಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ