LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

Advertisement
 --------------------------------ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಕೇಂದ್ರದ ವರಿಷ್ಠರು ಸಮರ್ಥಿಸುತ್ತಾರಾ? 

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

 

ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಸಚಿವರು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 ಕ್ಷಮೆಯಾಚನೆಗೆ ಪಟ್ಟು
ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ