Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ಯ ಕುಡಿದು ಸಿಕ್ಕಿಬಿದ್ದರು ವಾಹನ ಸೀಜ್ ಮಾಡುವಂತಿಲ್ಲ : ಹೈಕೋರ್ಟ್ 

Advertisement
ತೆಲಂಗಾಣ ಹೈಕೋರ್ಟ್ ಡ್ರಂಕ್ ಆಂಡ್ ಡ್ರೈವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವುದು ದೃಢಪಟ್ಟರೆ ಪ್ರಕರಣ ದಾಖಲಿಸಬಹುದು, ಆದರೆ ಕೇವಲ ಆ ಕಾರಣಕ್ಕಾಗಿ ವಾಹನವನ್ನು ಸೀಜ್ ಮಾಡುವ ಅಧಿಕಾರ ಪೊಲೀಸರಿಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ .

ಕೋರ್ಟ್ ಆದೇಶದ ಪ್ರಕಾರ, ಡ್ರಂಕ್ ಆಂಡ್ ಡ್ರೈವ್‌ನಲ್ಲಿ ಸಿಕ್ಕಿಬಿದ್ದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅಗತ್ಯವಿದ್ದರೆ ಪ್ರಾಸಿಕ್ಯೂಷನ್‌ಗೆ ಒಳಪಡಿಸಬೇಕು. ಆದರೆ ವಾಹನವನ್ನು ವಶಪಡಿಸಿಕೊಳ್ಳುವುದು ಕಾನೂನುಬದ್ಧವಲ್ಲ ಎಂದು ತಿಳಿಸಿದೆ.

ಈ ಪ್ರಕರಣಗಳಲ್ಲಿ ವಿಳಂಬ ಮಾಡದೆ ಮೂರು ದಿನಗಳೊಳಗೆ ಚಾರ್ಜ್‌ಶೀಟ್ (ದೋಷಾರೋಪ ಪಟ್ಟಿ) ದಾಖಲಿಸಬೇಕು ಮತ್ತು ತನಿಖೆ ವೇಗವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದೆ. ಅಲ್ಲದೆ, ಸಾರಿಗೆ ಇಲಾಖೆಯ ನಿಯಮ 44ಎ ಅನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ.

ಹೈಕೋರ್ಟ್ ನೀಡಿದ ಪ್ರಮುಖ ಸೂಚನೆಗಳು:

 

ವಾಹನ ಹಸ್ತಾಂತರ: ಮದ್ಯದ ಅಮಲಿನಲ್ಲಿರುವ ವ್ಯಕ್ತಿ ವಾಹನ ಚಲಾಯಿಸಬಾರದು. ಆದರೆ ಅದೇ ವಾಹನದಲ್ಲಿ ಮದ್ಯ ಸೇವಿಸದ, ಚಾಲನಾ ಪರವಾನಗಿ (License) ಹೊಂದಿರುವ ವ್ಯಕ್ತಿ ಇದ್ದರೆ ವಾಹನವನ್ನು ಅವರಿಗೆ ಹಸ್ತಾಂತರಿಸಬೇಕು.

ಬಂಧು-ಮಿತ್ರರಿಗೆ ಅವಕಾಶ: ವಾಹನದಲ್ಲಿ ಯಾರೂ ಇಲ್ಲದಿದ್ದರೆ, ಸಂಬಂಧಿಕರು ಅಥವಾ ಸ್ನೇಹಿತರನ್ನು ಸ್ಥಳಕ್ಕೆ ಕರೆಸಿ ಅವರಿಗೆ ವಾಹನವನ್ನು ನೀಡಬೇಕು.

ಕೊನೆಯ ಆಯ್ಕೆಯಾಗಿ ಪೊಲೀಸ್ ಠಾಣೆ: ಯಾರೂ ಲಭ್ಯವಿಲ್ಲದ ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ವಾಹನವನ್ನು ಪೊಲೀಸ್ ಠಾಣೆಗೆ ಕೊಂಡೊಯ್ಯಬೇಕು.

ತಕ್ಷಣ ಬಿಡುಗಡೆ: ಒಂದು ವೇಳೆ ವಾಹನ ಪೊಲೀಸರ ವಶದಲ್ಲಿದ್ದರೆ, ಮಾಲೀಕರು ಸಂಬಂಧಿತ ದಾಖಲೆಗಳನ್ನು ತೋರಿಸಿದ ತಕ್ಷಣ ವಾಹನವನ್ನು ಬಿಡುಗಡೆ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ.

ಪೊಲೀಸರು ತೆಲಂಗಾಣ ಮೋಟಾರ್ ವಾಹನಗಳ ನಿಯಮ 1989 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಡ್ರಂಕ್ ಆಂಡ್ ಡ್ರೈವ್ ಪ್ರಕರಣದಲ್ಲಿ ವಾಹನ ಸೀಜ್ ಮಾಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಇದೇ ವೇಳೆ, ನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಭೀಕರ ಅಪಘಾತಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ