Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಜನಗಣತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : ರಾಜ್ಯ ಸರ್ಕಾರ ನಿರಾಳ 

Advertisement
ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು,ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದೀಗ ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯಿತು.

ಈ ವೇಳೆ ಕೆಲಸರತ್ತು ವಿಧಿಸಿ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಮಧ್ಯಂತರ ಆದೇಶ ನೀಡಿದೆ.ಬಳಿಕ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿತು.

ಆಯೋಗದ ಪರವಾಗಿ ಪ್ರೊ. ರವಿವರ್ಮಕುಮಾರ್ ಅವರು ವಾದ ಆರಂಭಿಸಿದರು. 5 ನಿಮಿಷವಾದ ಮಂಡಿಸಲು ಅವಕಾಶ ನೀಡುವಂತೆ ಕೋರ್ಟಿಗೆ ಮನವಿ ಮಾಡಿದರು. ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧರಿಸಿ ವಾದ ಮಂಡನೆ ಮಾಡಿದರು.

ಶೀಘ್ರವಾದ ಮಂಡನೆ ಪೂರ್ಣಗೊಳಿಸಲು ಇದೆ ವೇಳೆ ಕೋರ್ಟ್ ಸೂಚನೆ ನೀಡಿತು. ಒಂದು ಪತ್ರ ಬಂದಿದೆ ಅದನ್ನು ನಿಮಗೆ ನೀಡುತ್ತೇನೆ ಎಂದು ಜಡ್ಜ್ ಗೆ ರವಿವರ್ಮಕುಮಾರ್ ಪತ್ರ ನೀಡಿದರು.

ಆಯೋಗದ ಸರ್ವೆಯ ವಿಧಾನವನ್ನು ಮರು ಪರಿಶೀಲಿಸಿದ್ದೇವೆ . ಸರ್ವೆ ವೇಳೆ ಮಾಹಿತಿ ನೀಡುವ ಬಲವಂತವಿಲ್ಲ. ಮನೆ ಬೀಗ ಹಾಕಿದ್ದರೆ, ಮನೆಯಲ್ಲಿ ಯಾರೂ ಇಲ್ಲದಿದ್ದರೆ, ಕುಟುಂಬದವರು ಸರ್ವೆಯಲ್ಲಿ ಭಾಗವಹಿಸಲು ಬಯಸಿದಿದ್ದರೆ, ಹೀಗೆ ಸರ್ವೇ ಮಾಡುವವರಿಗೆ ಆಯ್ಕೆಗಳನ್ನ ನೀಡಲಾಗಿದೆ ಮಾಹಿತಿ ನೀಡುವುದಿಲ್ಲ ವೆಂದು ಜನರು ಹೇಳಲು ಅವಕಾಶವಿದೆ ಎಂದು ರವಿವರ್ಮಕುಮಾರ್ ವಾದಿಸಿದರು.

ಆಯೋಗದ ವಾದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ವಕೀಲ ಪ್ರಭುಲಿಂಗ ನವರಿಗೆ ವಾದ ಆರಂಭಿಸಿದರು.

ಸರ್ವೆಯಲ್ಲಿ ಭಾಗವಹಿಸಬೇಕಿದ್ದರೆ, ಕೇಂದ್ರ ರಾಜ್ಯ ಸರ್ಕಾರ ಪ್ರತ್ಯೇಕ ಗಣತಿ ಮಾಡುತ್ತಿದ್ದಾರೆ. ಸರ್ವೆ ಹೆಸರಿನಲ್ಲಿ ಜನಗಣತಿ ಮಾಡುತ್ತಿದ್ದಾರೆ ಎಂದು ವಾದಿಸಿದರು. ಈ ವೇಳೆ ಹೈಕೋರ್ಟ್ ಆಧಾರ್ ನಲ್ಲಿನ ದತ್ತಾಂಶ ಪಡೆಯುತ್ತಿಲ್ಲ. ಕೇವಲ ಗುರುತಿಗಷ್ಟೇ ಪಡೆಯುತ್ತೇವೆ ಎಂದು ಸರ್ಕಾರ ಹೇಳಿದೆ.

ಈ ಸಂದರ್ಭದಲ್ಲಿ ಅರ್ಜಿದಾರರ ಪರವಾಗಿ ವಕೀಲ ವಿವೇಕ್ ರೆಡ್ಡಿ ವಾದ ಆರಂಭಿಸಿದರು. ಸರ್ಕಾರದ ನಿಲುವಿನಲ್ಲಿ ಅಲ್ಪ ಬದಲಾವಣೆಯಿಂದ ಪ್ರಯೋಜನವಿಲ್ಲ. ಸಂಗ್ರಹ ಮಾಡುವಾಗ ದತ್ತಾಂಶ ಸೋರಿಕೆ ಆಗುವ ಸಾಧ್ಯತೆ ಇದೆ.

ದತ್ತಾಂಶಕ್ಕೆ ಯಾವ ಕಾನೂನಿನ ರಕ್ಷಣೆ ಇದೆ ಎಂಬುವುದು ಸ್ಪಷ್ಟವಿಲ್ಲ. ಆಧಾರ್‌ಗೆ ಕಾಯ್ದೆಯ ರಕ್ಷಣೆ ಇದೆ ಆದರೆ ಇಲ್ಲಿಲ್ಲ. ಆಧಾರಿಗಿಂತ ಹೆಚ್ಚಿನ ವಿವರವನ್ನು ಇಲ್ಲಿ ನೀಡುತ್ತಿದ್ದೇವೆ.

ಹಣ ಆಸ್ತಿ ಜಾತಿ ಎಲ್ಲದರ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ. ಆದರೆ ಆಧಾರ್ ಕಾರ್ಡ್ ಕಾಯ್ದೆಗೆ ಇರುವ ರಕ್ಷಣೆ ಜಾತಿ ಸರ್ವೆಗೆ ಇಲ್ಲ. ಇಲ್ಲಿ ಖಾಸಗಿತನದ ಹಕ್ಕಿನ ರಕ್ಷಣೆಯ ಪ್ರಶ್ನೆ ಇದೆ ಎಂದು ವಿವೇಕ್ ರೆಡ್ಡಿ ವಾದಿಸಿದರು.

ಇದೆ ವೇಳೆ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಕೂಡ ವಾದಿಸಿದರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಮಾಹಿತಿ ರಕ್ಷಣೆ ಕಡ್ಡಾಯವಾಗಿದೆ ಸೂಕ್ಷ್ಮ ಮತ್ತು ವೈಯಕ್ತಿಕ ದತ್ತಾಂಶ ರಕ್ಷಣೆಗೆ ನೀತಿರೂಪಿಸಬೇಕು.

ಸಮೀಕ್ಷೆ ವೇಳೆ ಸಂಗ್ರಹಿಸಿದ ತಂಶ ಎಲ್ಲಿ ಸಂಗ್ರಹಿಸುತ್ತಾರೆ? ಹ್ಯಾಕಿಂಗ್ ನಿಂದ ದತ್ತಾಂಶ ರಕ್ಷಣೆಗೆ ಯಾವ ಕ್ರಮ ಕೈಗೊಂಡಿದ್ದಾರೆ? ಯಾವುದರ ಮಾಹಿತಿಯನ್ನು ಕೂಡ ರಾಜ್ಯ ಸರ್ಕಾರ ನೀಡಿಲ್ಲ ಎಂದು ವಾದಿಸಿದರು.

ಷರತ್ತುಗಳೇನು?

1) ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು.

2) ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.

3) ಜನರು ಸ್ವಯಂ ಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು.

4) ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.

5) ಮಾಹಿತಿ ನೀಡುವಂತೆ ಜನರಿಗೆ ಯಾವುದೇ ಒತ್ತಡ ಹಾಕಬಾರದು.

 

6) ಆಯೋಗ ಹೊರತುಪಡಿಸಿ ಬೇರೆ ಯಾರಿಗೂ ದತ್ತಾಂಶ ಸಿಗುವಂತಿಲ್ಲ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ