Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಲ್​​​ಸಿ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್​​​​​

Advertisement
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್​​​ಸಿ ಸಿ.ಟಿ.ರವಿ ಅವರು ಪರಿಷತ್​​​ನಲ್ಲಿ ಆಡಿದ್ದಾರೆನ್ನಲಾದ ಅವಾಚ್ಯ ಪದಬಳಕೆ ಆರೋಪ ಸಂಬಂಧ ಇಂದು ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್​​​​​ ಜ.30ಕ್ಕೆ ಮುಂದೂಡಿ ಆದೇಶಿಸಿದೆ.

ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಪೊಲೀಸರು ತನಿಖೆ ನಡೆಸಿ, ವರದಿ ಸಲ್ಲಿಸಲು ಅನುಮತಿಸಬೇಕೆ ಎಂಬುವುದನ್ನು ನಿರ್ಧರಿಸಬೇಕಿದೆ. ಹೀಗಾಗಿ ಮುಂದಿನ ವಿಚಾರಣೆವರೆಗೂ ರಾಜ್ಯ ಸರ್ಕಾರ ರವಿ ಅವರ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಕೋರ್ಟ್​​​ ಹೇಳಿದೆ.


ಸಿ.ಟಿ.ರವಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು, ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ತಪ್ಪು. ಅದು ಅಪರಾಧವಾಗುತ್ತದೆ. ಆದರೆ, ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಅಪರಾಧವಲ್ಲ. ಇನ್ನು ಘಟನೆ ಬಗ್ಗೆ ಸಭಾಧ್ಯಕ್ಷರ ನಿಲುವೇನು ಎಂದು ಪೀಠ ಪ್ರಶ್ನಿಸಿದ್ದು, ಸದನದಲ್ಲಿ ಏನೂ ನಡೆದಿಲ್ಲ ಎಂದು ಸಭಾಧ್ಯಕ್ಷರು ಹೇಳಿದ್ದರು ಎಂದು ನಾಗೇಶ್ ಅವರು ವಾದಿಸಿದರು.


ರಾಜ್ಯ ಸರ್ಕಾರದ ಪರವಾಗಿ ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದಿಸಿ, ಸದನವನ್ನು ಮುಂದೂಡಲಾಗಿದ್ದು, ಸಭಾಧ್ಯಕ್ಷರೂ ಇರಲಿಲ್ಲ. ಆಗ ರವಿ ಅವರು ಆಕ್ಷೇಪಾರ್ಹವಾದ ಬಳಸಿದ್ದಾರೆ. ಇದೇ ವೇಳೆ ಆಡಿಯೋ ಸಂಬಂಧ ಎಫ್‌ಎಸ್‌ಎಲ್‌ ವರದಿ ಇದೆಯೇ ಎಂದು ಪೀಠ ಪ್ರಶ್ನಿಸಿದೆ.


ಎಫ್‌ಎಸ್‌ಎಲ್‌ ವರದಿ ಬಂದಿಲ್ಲ. ಸದನದ ಕಾರ್ಯದರ್ಶಿ ಅವರು ಆಕ್ಷೇಪಾರ್ಹವಾದ ವಿಡಿಯೊ ಕ್ಲಿಪ್‌ ನೀಡಿಲ್ಲ. ಸದನ ಮುಂದೂಡಿದ್ದರಿಂದ ಸಭಾಧ್ಯಕ್ಷರು ಇರಲಿಲ್ಲ. ತನಿಖೆ ನಡೆಸಲು ಸಿಸಿಟಿವಿ ತುಣುಕು ನೀಡುವಂತೆ ಕಾರ್ಯದರ್ಶಿ ಅವರನ್ನು ಕೋರಿದ್ದೇವೆ ಎಂದು ಎಸ್​​​​​ಪಿಪಿ ಪೀಠದ ಗಮನಕ್ಕೆ ತಂದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್​, ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ