Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋರುತ್ತಿರುವ ಶಾಲೆಯಲ್ಲಿ ಮಕ್ಕಳು ಅಭ್ಯಾಸ ಮಾಡುವುದು ಹೇಗೆ.?

Advertisement
ಸೇಡಂ:- ತಾಲೂಕಿನ ಮದನಾ ಸರಕಾರ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಲ್ಪ ಮಳೆ ಬಂದರೂ ಸಾಕು ಮೇಲ್ಛಾವಣಿ ಸೋರುತ್ತದೆ.ಇದರಿಂದ ಮಕ್ಕಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.ಅಧಿಕಾರಿಗಳು ಕಣ್ಣು ಮುಚ್ಚಿ ಕೆಲಸ ಮಾಡುತ್ತಿದ್ದಾರೆಯೇ ಎಂಬುದು ಅನುಮಾನವಿದೆ.



ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿದಾಗ ಇಂತಹ ಪರಿಸ್ಥಿತಿ ತಮ್ಮ ಕಣ್ಣಿಗೆ ಕಾಣಿಸದೇ ಇರುವುದೇ.ಮಕ್ಕಳ ಜವಾಬ್ದಾರಿ ಅವರಿಗಿಲ್ಲವೇ.?ಹೀಗೆ ಅನೇಕ ಪ್ರಶ್ನೆಗಳು ಜನರಲ್ಲಿ ಮೂಡಿಬರುತ್ತಿವೆ.



ಇದೊಂದೇ ಶಾಲೆಯಷ್ಟೇ ಅಲ್ಲ ತಾಲೂಕಿನ ಅನೇಕ ಗ್ರಾಮಗಳಲ್ಲಿ ಸರಕಾರಿ ಶಾಲೆಗಳ ಸ್ಥಿತಿ ಹೀಗೇನೇ ಇದೆ.ಮತ್ತು ಶಾಸಕರು ಯಾಕೆ ಗಮನ ಕೊಡುತ್ತಿಲ್ಲ.?ಅಂದರೆ ಶಾಲಾ ಮಕ್ಕಳಿಗೆ ಮತದಾನ ಹಕ್ಕು ಇರುವುದಿಲ್ಲ ಅದೇ ಕಾರಣ.?

ಸದ್ಯ ಇರುವ ಶಾಸಕರು ಅಷ್ಟೇ ಅಲ್ಲ ಈ ಹಿಂದೆ ಇರುವ ಶಾಸಕರಿಗೂ ಅನೇಕ ಬಾರಿ ಮನವಿ ನೀಡಲಾಗಿದೆ ಶಾಸಕರ ಮನಸು ಈ ಕಡೆ ನೋಡುತ್ತಿಲ್ಲ ಎಂದು ಕಾಣಿಸುತ್ತಿದೆ.

ಕೇವಲ ಪಟ್ಟಣಗಳಲ್ಲಿ ಇರುವ ಶಾಲೆಗಳು ಅಷ್ಟೇ ಅಲ್ಲ ಸರ್ ಸ್ವಲ್ಪ ಹಳ್ಳಿಗಳಲ್ಲಿನ ಶಾಲೆಗಳತ್ತ ಕೂಡ ಗಮನ ಕೊಡಿ.ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬುದನ್ನು ಮರೆಯಬೇಡಿ.

ಮಳೆಗಾಲದಲ್ಲಿ ಮೇಲ್ಛಾವಣಿ ಸೋರುತ್ತಿರುವ ಪ್ರತಿ ಶಾಲೆಗೂ ಬೇಟಿ ನೀಡಲು ಅಧಿಕಾರಿಗಳಿಗೆ ತಿಳಿಸಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿ ಶಾಸಕರೇ ಎಂದು ಸ್ಥಳೀಯರ ಮನವಿ ಆಗಿರುತ್ತದೆ.

ಈ ಸಮಸ್ಯೆಯನ್ನು ಸಚಿವರಾದ ಮತ್ತು ಹಾಲಿ ಶಾಸಕರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ