Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂ. 30ಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ

Advertisement
ಹುಬ್ಬಳ್ಳಿ/ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಜೂನ್ 30 ರಂದು ಬೆಳಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್. ಬಿ. ಶೆಟ್ಟೆಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ಆಯುಕ್ತ ಎಸ್‌ಬಿ ಶೆಟ್ಟೆಣ್ಣವರ್ ಅವರು ಜೂನ್ 30 ರಂದು ಕಾರ್ಪೊರೇಷನ್‌ನ ಸಭೆಯ ಸಭಾಂಗಣದಲ್ಲಿ ಎಚ್‌ಡಿಎಂಸಿಯ 24 ನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಆ ದಿನ, ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 11.00 ರವರೆಗೆ, ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.

ಅದರ ನಂತರ, ನಾಮಪತ್ರಗಳ ಪರಿಶೀಲನೆ, ಮಾನ್ಯ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವುದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಪ್ರಕಟಣೆ, ಅವಿರೋಧ ಚುನಾವಣೆಯ ಸಂದರ್ಭದಲ್ಲಿ ಫಲಿತಾಂಶಗಳ ಘೋಷಣೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆಯ ಪ್ರಕ್ರಿಯೆಗಳು ನಡೆಯುತ್ತವೆ.

ಈ‌ ಬಾರಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಇರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಪಾಲಿಕೆಯಲ್ಲಿ 15 ಜನ ಬಿಜೆಪಿ ಮಹಿಳಾ ಸದಸ್ಯರಿದ್ದಾರೆ.
ಇವರಲ್ಲಿ ಪ್ರೀತಿ‌ ಖೋಡೆ, ಪೂಜಾ ಶೆಜವಾಡಕರ್, ರಾಧಾಬಾಯಿ ಸಫಾರಿ,‌ ಮೀನಾಕ್ಷಿ ವಂಟಮೂರಿ ಸೇರಿದಂತೆ ಹಲವರು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಧಿಸೂಚನೆ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ‌ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬ ಗೆ ಮೀಸಲಿದೆ. ಹೀಗಾಗಿ ಮತ್ತೊಮ್ಮೆ ಮಹಿಳಾ ಸಾರಥ್ಯ ಸಿಗಲಿದೆ.
82 ಸದಸ್ಯ ಬಲವಿರುವ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಪಕ್ಷೇತರರು ಹಾಗೂ ಓರ್ವ ಜೆಡಿಎಸ್ ಸದಸ್ಯರಿದ್ದಾರೆ. ಪಕ್ಷೇತರರಲ್ಲಿ ಮೂವರು ಬಿಜೆಪಿ ಸೇರಿದ್ದಾರೆ. ಬಹುತೇಕ ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವ ಸಾದ್ಯತೆಯಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ