Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳಿ ಮರ್ಯಾದಾ ಹತ್ಯೆ:ಗೋಪಾಲ ಎಲ್ ನಾಟೇಕರ್ ಖಂಡನೆ

Advertisement
ಸೇಡಂ : ಹುಬ್ಬಳ್ಳಿ-ಧಾರವಾಡದ ಇನಾಂವೀರಾಪೂರ ಗ್ರಾಮದಲ್ಲಿ ಮಾನ್ಯ ಎಂಬ ಯುವತಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ಮಾನ್ಯಳ ತಂದೆ ಪ್ರಕಾಶಗೌಡ ಪಾಟೀಲ್, ಸಂಬಂಧಿಗಳಾದ ವೀರನಗೌಡ ಹಾಗೂ ಅರುಣಗೌಡ ಎಂಬುವವರು ಸೇರಿ ಯುವಕನ ಮನೆಯವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ 7 ತಿಂಗಳ ಗರ್ಭಿಣಿ ಮಾನ್ಯಳನ್ನು ಕೊಲೆ ಮಾಡಿರುವ ಘಟನೆಯನ್ನು ಗೋಪಾಲ ಎಲ್ ನಾಟೇಕರ್ ವಕೀಲರು ಹಾಗೂ ತಾಲೂಕ ಅಧ್ಯಕ್ಷರು ಅಂಬೇಡ್ಕರ್ ಯುವ ಸೇನೆ ಸೇಡಂ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ದಲಿತರ ಮೇಲೆ ಹಲ್ಲೆ, ಕಗ್ಗೋಲೆ, ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ರಾಜ್ಯ ಸರಕಾರ ಯಾವುದೇ ರೀತಿಯಿಂದ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮ ಜಾರಿಗೊಳಿಸಬೇಕೆಂದು ಒತ್ತಾಯಿಸಿದರೆ.

ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಯವರು ಇಂತಹ ಪ್ರಕರಣಗಳಲ್ಲಿ ಸೂಕ್ತ ರಕ್ಷಣೆ ಕೊಡದೆ ನಿರ್ಲಕ್ಷ ವಹಿಸಿರುವುದೇ ಈ ಕೊಲೆಗೆ ಕಾರಣವಾಗಿದೆ.

ಮಾನ್ಯ ಪರವಾಗಿ ಸರ್ಕಾರ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್‌ಅನ್ನು ನೇಮಿಸಿ ಈ ಆರೋಪಿಗಳಿಗೆ ಯಾವುದೇ ರೀತಿಯ ಜಾಮೀನು ಸಿಗದಂತೆ ಮುತುವರ್ಜಿವಹಿಸಬೇಕು ಹಾಗೂ ಇಂತಹ ಘಟನೆಗೆ ಕಾರಣರಾಗುವಂತಹವರನ್ನು ಗಲ್ಲುಶಿಕ್ಷೆಗೆ ಒಳಪಡಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾನೂನನ್ನು ರೂಪಿಸಬೇಕು.

ಅಲ್ಲದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಮುತುವರ್ಜಿ ವಹಿಸಿ. ಮೃತ/ ನೊಂದ ದಲಿತ ಕುಟುಂಬಕ್ಕೆ ಸರ್ಕಾರ ವತಿಯಿಂದ 1 ಕೋಟಿ ಪರಿಹಾರ, ಮತ್ತು ದೌರ್ಜನ್ಯ ಪ್ರಕರಣಕ್ಕೆ ಅನುಗುಣವಾಗಿ ಸರಕಾರಿ ನೌಕರಿ ನೀಡಬೇಕು.

ಯುವಕನ ಕುಟುಂಬಕ್ಕೆ ಸೂಕ್ತ ಪೊಲೀಸ್‌ ರಕ್ಷಣೆ ಕೊಡಬೇಕೆಂದು ಗೋಪಾಲ ಎಲ್ ನಾಟೇಕರ್ ಅವರು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ