Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಅತ್ಯಾಚಾರಿ ಏನ್ ಕೌಂಟರ್ ಪ್ರಕರಣ : ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ 

Advertisement
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆಗೈದ ಆರೋಪಿ 'ಎನ್ ಕೌಂಟರ್' ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದ್ದು, ನಾಳೆ ಅಥವಾ ನಾಡಿದ್ದು ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ.

5 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಗುಂಡೇಟೆಗೆ ಬಲಿಯಾಗಿದ್ದಾನೆ. ಎದೆಗೆ ಗುಂಡು ತಗುಲಿದ್ದರಿಂದ ಆರೋಪಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ. ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ರಿತೇಶ್ ಕುಮಾರ್ ಬಲಿಯಾಗಿದ್ದಾನೆ.


ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದರು.


ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದ ವೇಳೆ ಫೈರಿಂಗ್ ಮಾಡಲಾಗಿತ್ತು. ಎದೆಗೆ ಗುಂಡು ತಗುಲಿ ರಿತೇಶ್ ಕುಮಾರ್ ಮೃತಪಟ್ಟಿದ್ದಾನೆ.


35 ವರ್ಷದ ರಿತೇಶ್ ಕುಮಾರ್ ಹಲವಾರು ತಿಂಗಳಿನಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದ. ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ಅನ್ನಪೂರ್ಣ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ