ಕಾಳಗಿ:2025-26ನೇ ಸಾಲಿನ ಬೆಳೆ ವಿಮೆ ಪರಿಹಾರ ಹಾಗೂ ಬರಗಾಲ ಎಂದು ಘೋಷಣೆ ಮಾಡಬೇಕು,ರೈತರಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಮಂಗಳವಾರ ಕಾಳಗಿ ಪಟ್ಟಣದಲ್ಲಿ ರೈತರು ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಲಾಯಿತು,
ಕಾಳಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಳಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳೆ ವಿಮೆ ಪಾವತಿ ಪ್ರಕ್ರಿಯೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ. ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಳೆ ವಿಮೆ ಹಾಗೂ ಬರಗಾಲ ಎಂದು ಘೋಷಿಸಿ, ರೈತರ ಖಾತೆಗಳಿಗೆ ಬೆಳೆ ವಿಮೆ ಕೂಡಲೇ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕ ಅವಿನಾಶ್ ಜಾಧವ್, ರಾಜೇಶ್ ಗುತ್ತೇದಾರ, ವೀರಣ್ಣ ಗಂಗಾಣ್ಣಿ, ರಾಘವೇಂದ್ರ ಗುತ್ತೇದಾರ, ಪ್ರಶಾಂತ ಕದಂ,ಗೌರಿಶಂಕರ್ ನವದಾಗಿ ಸೇರಿದಂತೆ ವಿವಿಧ ಮಠಾಧೀಶರು, ರೈತ ಮುಖಂಡರು ಹಾಗೂ ಅನೇಕ ರೈತರು ಉಪಸ್ಥಿತರಿದ್ದರು.
ವರದಿ : ಹಣಮಂತ ಕುಡಹಳ್ಳಿ


