ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್ಗಳು ಫೇಸ್ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿವೆ.
ಇದನ್ನು ಗಮನಿಸಿದ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೀಗ ಈ ಬಗ್ಗೆ ಸ್ವತಃ ದೊಡ್ದಣ್ಣ ಸ್ಪಷ್ಟನೆ ನೀಡಿದ್ದಾರೆ.
'ಪಬ್ಲಿಕ್ ಫ್ರೆಂಡ್' ಹೆಸರಿನ ಫೇಸ್ಬುಕ್ ಪೇಜ್ನಲ್ಲಿ 'ದೊಡ್ಡಣ್ಣ ಇನ್ನಿಲ್ಲ' ಎಂದು ಪೋಸ್ಟ್ ಹಾಕಲಾಗಿದೆ. ಮರಣ ಎಂದು ಜೂನ್ 12ರ ಡೇಟ್ ಹಾಕಲಾಗಿದೆ. 'ನಿಮ್ಮ ಅಭಿನಯ, ನಿಮ್ಮ ಸಾಧನೆ ಯಾವಾಗಲೂ ನಮ್ಮ ಜೊತೆ ಇರುತ್ತದೆ' ಎಂದು ನೆನಪಿಸಿಕೊಳ್ಳಲಾಗಿದೆ.
ಇದನ್ನು ನೋಡಿದ ದೊಡ್ದಣ್ಣ ಶಾಕ್ ಆಗಿದ್ದಾರೆ. ತಾನು ಬದುಕಿದ್ದಾಗಲೇ ಶ್ರದ್ಧಾಂಜಲಿ ಸಲ್ಲಿಸಿರುವ ಹಾಗೂ ಸುಳ್ಳು ಸುದ್ದಿ ಹರಡಿರುವವರ ವಿರುದ್ಧ ಕಿಡಿಕಾರಿದ್ದಾರೆ.

