Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ : ಶಾಸಕ ಯತ್ನಾಳ್

Advertisement
ದಾವಣಗೆರೆ : ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಹೊಸ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ.ಹೊಸ ಪಕ್ಷ ಕಟ್ಟಿ ಹಿಂದೂಗಳ ಮತ ವಿಭಜನೆ ಮಾಡಬಾರದು ಎಂಬುದು ನನ್ನ ಉದ್ದೇಶವಾಗಿದೆ ಎಂದರು.


ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ನಾನು ಅಲ್ಲ ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.


ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಅಂತ ದೆಹಲಿಯಲ್ಲಿ ಡೀಲ್ ಆಗಿತ್ತು ಡಿಕೆಶಿ ಸಿಎಂ, ವಿಜಯೇಂದ್ರ ಉಪಮುಖ್ಯ ಮಂತ್ರಿ ಅಂತ ದೆಹಲಿಯಲ್ಲಿ ಡೀಲ್ ಆಗಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.


ದಾವಣಗೆರೆಯಲಿ ಮಾತನಾಡಿದ ಅವರು, ನಾನು ಹೈಕಮಾಂಡ್​ಗೆ ಕ್ಷಮೆ ಕೇಳಿಲ್ಲ. ಯಾವುದೂ ಪತ್ರ ಕೂಡ ಬರೆದಿಲ್ಲ, ಕೈಮುಗಿದಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ.


ಅಲ್ಲದೆ ಒಂದು ಪಕ್ಷದ ರಾಜ್ಯಾಧ್ಯಕ್ಷ ಬರುತ್ತಾರೆ ಎಂದರೆ ಕನಿಷ್ಠ ಸಾವಿರಾರು ಜನರಾದರೂ ಸೇರಬೇಕು. ಆದರೆ, ಬಿಜೆಪಿ ನಡೆಸಿದ ಈ ಜನಾಕ್ರೋಶ ಯಾತ್ರೆಯಲ್ಲಿ 800ರಿಂದ 1000 ಜನ ಅಷ್ಟೇ ಸೇರಿದ್ದರು.


ನಾನು ಯಾವುದಾದರೊಂದು ಕಾರ್ಯಕ್ರಮಕ್ಕೆ ತೆರಳಿದರೆ ಏನಿಲ್ಲವೆಂದರೂ 20 ಸಾವಿರ ಜನ ಸೇರುತ್ತಾರೆ. ಬಿಜೆಪಿ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ಮೋಸ ಆಗುತ್ತಿದೆ ಎಂದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ