Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕಾರಣಿಗಳೊಂದಿಗೆ ಮಲಗು,ಇಲ್ಲಾ ತಲಾಖ್ ನೀಡುತ್ತೇನೆ : ಗಂಡನ ಕರಾಳ ಮುಖ ಬಯಲು

Advertisement

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ರಾಜಕಾರಣಿ, ಸಹಚರರೊಂದಿಗೆ ಮಲಗುವಂತೆ ಪತಿಯೇ ಪತ್ನಿಗೆ ಪೀಡಿಸುತ್ತಿದ್ದುದಲ್ಲದೇ ಆರು ಬಾರಿ ತಲಾಖ್‌ ನೀಡಿ, ಅಬಾರ್ಷನ್‌ ಮಾಡಿಸಿರುವಂತಹ ಘಟನೆ ನಡೆದಿದೆ.


ಪತಿಯ ಈ ವರ್ತನೆಯಿಂದ ರೋಸಿ ಹೋದ ಪತ್ನಿ ಇದೀಗ ಪೊಲೀಸರ ಮೊರೆ ಹೋಗಿದ್ದಾರೆ.ಸಂತ್ರಸ್ತೆ 2021 ರಲ್ಲಿ ಆರೋಪಿ ಯೂನಸ್‌ ಪಾಷಾನನ್ನು ವಿವಾಹವಾಗಿದ್ದಳು.

ಇದಾದ ನಾಲ್ಕು ತಿಂಗಳ ನಂತರ ಯೂನಸ್‌, ಆತನ ತಂದೆ ಚಿಂದ್‌ ಪಾಷಾ ಹಾಗೂ ತಾಯಿ ಪಹೀನ್‌ ತಾಜ್‌ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಪ್ರಾರಂಭಿಸಿದ್ದಾರೆ.

ಈ ನಡುವೆ ಆಕೆ ಗರ್ಭಿಣಿಯೂ ಆಗಿದ್ದು, ಆಕೆಯ ಹೊಟ್ಟೆಗೆ ಒದ್ದು ಹಲ್ಲೆ ಮಾಡಿದ್ದಲ್ಲದೇ ಒತ್ತಾಯಪೂರ್ವಕವಾಗಿ ಗರ್ಭಪಾತ ಮಾಡಿಸಿದ್ದಾರೆಂದು ಆರೋಪಿಸಲಾಗಿದೆ.

ಈ ನಡವಳಿಕೆಯನ್ನು ಪ್ರಶ್ನಿಸಿದ ಪತ್ನಿಗೆ ಗನ್‌ ಸೇರಿದಂತೆ ಮಾರಕ ಆಯುಧಗಳನ್ನು ತೋರಿಸಿ ಸಂತ್ರಸ್ಥೆಗೆ ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದರು. 2023 ರಲ್ಲಿ ಸಂತ್ರಸ್ಥೆ ಮೇಲೆ ಗಂಭೀರ ಹಲ್ಲೆ ಮಾಡಿದ್ದ ಬಗ್ಗೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಯೂನಸ್‌ಗೆ ರೌಡಿಗಳು ಹಾಗೂ ರಾಜಕಾರಣಿಗಳ ನಂಟು ಇದ್ದು, ಪತ್ನಿಯನ್ನು ಅವರಿಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾನೆ ಎಂಬುದು ತಿಳಿದು ಬಂದಿದೆ. ಇದರಿಂದ ಸಂತ್ರಸ್ಥೆ ಭಯಗೊಂಡು ತಾಯಿಯ ಮನೆಗೆ ಹೋಗಿ ಅಲ್ಲಿ ವಾಸವಾಗಿದ್ದಾಳೆ.

ಇತ್ತೀಚೆಗೆ ಮಹಿಳೆ ತನ್ನ ಬಟ್ಟೆಗಳನ್ನು ವಾಪಸ್‌ ತರಲು ಪತಿಯ ಮನೆಗೆ ಹೋದಾಗ ಪಾಷಾ ಕೊಲೆ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಸಂತ್ರಸ್ಥೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಬನಶಂಕರಿ ಠಾಣೆಯಲ್ಲಿ ದೂರು ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ