Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2004 ಹಾಗೂ 2013ರಲ್ಲಿ ನನಗೆ ಮಂತ್ರಿಗಿರಿ ತಪ್ಪಿತು, ತಾಳ್ಮೆಯಿಂದ ಇರಿ : ಡಿ.ಕೆ.ಶಿವಕುಮಾರ್ 

Advertisement

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದಿದೆ. 

ಸಾಲು ಸಾಲು ಶಾಸಕರು ರಾಜೀನಾಮೆಗೆ ಮುಂದಾಗುತ್ತಿರುವ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಂಗಪ್ರವೇಶ ಮಾಡಿದ್ದಾರೆ.

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಯಾವುದೇ ಕಾರಣಕ್ಕೂ ಧೈರ್ಯ ಹಾಗೂ ತಾಳ್ಮೆ ಕಳೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುವಾಗ ತಮ್ಮ ರಾಜಕೀಯ ಜೀವನದ ಹಳೆಯ ದಿನಗಳನ್ನು ಉದಾಹರಿಸಿದ ಡಿ.ಕೆ. ಶಿವಕುಮಾರ್, ತಮಗೂ ಕೂಡ ಹಿಂದೆ ಶಾಸಕನಾಗಿದ್ದಾಗ ಹಲವು ಬಾರಿ ಸಚಿವ ಸ್ಥಾನ ಕೈತಪ್ಪಿದ್ದ ಘಟನೆಗಳನ್ನು ಸ್ಮರಿಸಿದರು. 

ವಿಶೇಷವಾಗಿ 2004 ಹಾಗೂ 2013ರಲ್ಲಿ ತಮಗೆ ಮಂತ್ರಿಗಿರಿ ತಪ್ಪಿದ್ದರೂ ಸಹ ತಾವು ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳದೆ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸಿದ್ದಾಗಿ ತಿಳಿಸಿದರು. 

ಅಂದು ತಾವು ತಾಳ್ಮೆಯಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರಿಂದಲೇ ಇಂದು ಉಪಮುಖ್ಯಮಂತ್ರಿಯಂತಹ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಾಗಿದೆ ಎಂದು ಅತೃಪ್ತ ನಾಯಕರಿಗೆ ನೆನಪಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವ ಸ್ಥಾನಕೈತಪ್ಪಿದ ಮಂತ್ರಿ ಸ್ಥಾನ : ಹೆಬ್ಬಾಳ್ಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ 2004 ಹಾಗೂ 2013ರಲ್ಲಿ ನನಗೆ ಮಂತ್ರಿಗಿರಿ ತಪ್ಪಿತು, ತಾಳ್ಮೆಯಿಂದ ಇರಿ : ಡಿ.ಕೆ.ಶಿವಕುಮಾರ್ ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿಎಸ್.ಐ.ಆರ್. ನಿರ್ಲಕ್ಷಿಸಿದರೆ ಜನಪ್ರತಿನಿಧಿಗಳ ಅಸ್ತಿತ್ವಕ್ಕೆ ಧಕ್ಕೆ : ಮುರಳೀಧರ ಹಾಲಪ್ಪವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ ಹೊಸಬರಿಗೆ ಜಾಕ್‌ಪಾಟ್ : ಸಿದ್ದರಾಮಯ್ಯ ಸಂಪುಟದಲ್ಲಿದ್ದ 14 ಜನ್ ಔಟ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ : ಹೆಬ್ಬಾಳ್ಕರ್ ಔಟ್ , ಸವದಿ ಇನ್ ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆ