ಬಾಗಲಕೋಟೆ : ನನ್ನೂರು ತಾಲೂಕಿನ ಉತ್ತೂರು ನನ್ನ ಸ್ವಗ್ರಾಮ ಉತ್ತೂರಿನಲ್ಲಿಯೇ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಕಲಿತಿರುವೆ ನಾನು ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರಿಂದ ನನ್ನನ್ನು ಶಾಲೆ ಮುಖ್ಯಮಂತ್ರಿಯಾಗಿ ಮಾಡಿದ್ದರು ಎಂದು ಶಾಸಕ ಮಾಜಿ ಸಚಿವ ಆರ್ ಬಿ ತಿಮ್ಮಾಪೂರ ತಮ್ಮ ಶಾಲಾ ದಿನದ ನೆನಪನ್ನು ಮಾಡಿಕೊಂಡರು.
ಜಿಪಂ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ತಾಲೂಕಾಡಳಿತ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಿಕ್ಷಕ ದಿನೋತ್ಸವ ಸಮಿತಿ ಮುಧೋಳ ಇವರ ಸಂಯುಕ್ತಾಶ್ರಯದಲ್ಲಿ ಡಾ ರಾಧಾಕೃಷ್ಣನ ರವರ ಜನ್ಮದಿನದ ಅಂಗವಾಗಿ ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲೂಕಾ ಮಟ್ಟದ ಶಿಕ್ಷಕರ ದಿನೋತ್ಸವ-2026 ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಶಿಕ್ಷಕರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು ಇಂದಿನ ಸರ್ಕಾರಿ ಶಾಲಾ ಶಿಕ್ಷಕರು ಅಫ್ಡೇಟ್ ಆಗಬೇಕು ಹೊಸ ಹೊಸ ತಂತ್ರಜ್ಞಾನ ವಿನೂತನ ಕೌಶಲ ಬಳಸಿಕೊಂಡು ಮಕ್ಕಳಿಗೆ ಪಾಠಬೋಧನೆ ಮಾಡಬೇಕು ಪಾಠಬೋಧನೆ ಜತೆಗೆ ಜೀವನ ಶಿಕ್ಷಣ ನೀಡಿ, ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಜಾತಿ, ಮತ, ಧರ್ಮ, ಮೇಲು, ಕೀಳು ಎಂಬ ಭಾವನೆಯಿಂದ ಮಕ್ಕಳು ಹೊರಬರಬೇಕು ಅಂತಹ ಮನೋಭಾವನೆ ಮಕ್ಕಳಲ್ಲಿ ಮೂಡಿಸಬೇಕೆಂದು ಹೇಳಿದ ಬಿಇಒ ಕಚೇರಿ ಮತ್ತು ಶಿಕ್ಷಕರ ಗುರುಭವನ ಶೀಘ್ರದಲ್ಲಿ ಕಟ್ಟಿಸಿಕೊಡುವದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಮಾತನಾಡಿ ಗುರುವಿನ ಮಹತ್ವ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮತ್ತು ಜವಾಬ್ದಾರಿ ತಿಳಿಸಿಕೊಟ್ಟ ಅವರು ಗುಣಾತ್ಮಕ ಮತ್ತು ಮೌಲ್ಯಾಧರಿತ ಶಿಕ್ಷಣ ನೀಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ವರದಿ : ಬಸವರಾಜ ಪೂಜಾರಿ


