Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ಸೂಪರ್ ಪಾವರ್ ಆಗಲಿದೆ: ಜಗದೀಶ್ ಶೆಟ್ಟರ್

Advertisement
ಬೆಳಗಾವಿ: ಲೋಕಸಭಾ ಚುನಾವಣೆ ಎಂದರೆ ಇಡೀ ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ. ಹಾಗಾಗಿ ಭಾರತ ದೇಶವನ್ನು ಸೂಪರ್ ಪಾವರ್ ದೇಶ ಮಾಡಲು ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೇಟ್ಟರ್ ಅವರು ಕರೆ ನೀಡಿದರು.



ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಹಾಪುರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ನಾನು ನಾಮಪತ್ರ ಸಲ್ಲಿಕೆ ಮಾಡುವ ದಿನ ಜನ ಬಂದಿದನ್ನು ನೋಡಿದರೆ ಜನ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ತೀರ್ಮಾನ ಮಾಡಿದ್ದಾರೆ. ದೇಶದ ಅಭಿವೃದ್ಧಿ, ದೇಶದ ಭದ್ರತೆಯನ್ನು ನೋಡಿಕೊಂಡರು ಮತ ನೀಡಬೇಕು. ಲೋಕಸಭಾ ಚುನಾವಣೆ ಎಂದರೆ ಇಡೀ ದೇಶದ ಭವಿಷ್ಯ ರೂಪಿಸುವ ಚುನಾವಣೆ ಆಗಿದೆ. ನರೇಂದ್ರ ಮೋದಿಯವರು ತಮ್ಮ ಆಡಳಿತ 10 ವರ್ಷದಲ್ಲಿ ಉತ್ತಮ ಸರ್ಕಾರ ನಡೆಸಿದ್ದಾರೆ. ಕಳೆದ 10 ವರ್ಷದಲ್ಲಿ ಅಭಿವೃದ್ಧಿಯಲ್ಲಿ 14 ನೇ ಸ್ಥಾನದಲ್ಲಿ ಇದ್ದ ಭಾರತ 5 ಸ್ಥಾನಕ್ಕೆ ಬಂದಿದೆ.‌ ಮುಂದಿನ 10-15 ವರ್ಷದಲ್ಲಿ ಇಡೀ ಜಗತ್ತಿನಲ್ಲಿ ಮೋದಿಯವರ ಆಡಳಿತದಲ್ಲಿ ಸೂಪರ್ ಪಾವರ್ ದೇಶ ಆಗಲಿದೆ ಎಂದರು.



ಶಾಸಕ ಅಭಯ ಪಾಟಿಲ್ ಅವರು ಮಾತನಾಡಿ, ಜಗದೀಶ ಶೆಟ್ಟರ್ ಅವರು ಸಿಎಂ ಆಗಿ, ಸಚಿವರಾಗಿ, ವಿಧಾನ ಸಭೆ ಅಧ್ಯಕ್ಷರಾಗಿ ಕೆಲಸ ಮಾಡಿದವರು, ಅವರು ಲೋಕಸಭೆಗೆ ಆಯ್ಕೆ ಆದರೆ ಬೆಳಗಾವಿ ಸಾಕಷ್ಟು ಅಭಿವೃದ್ಧಿ ಆಗಲಿದೆ. ಹಾಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ತಿಳಿಸಿದರು‌.

ಈ ವೇಳೆ ಪಾಲಿಕೆ ಸದಸ್ಯರಾದ ಗಿರೀಶ್ ದೊಂಗಡಿ, ಪ್ರಮುಖರಾದ ಚಂದ್ರಶೇಖರ ಬೆಂಬಳಗಿ, ಬಾಬಣ್ಣ ಕಿತ್ತೂರು ಹಾಗೂ ದಾನಮ್ಮದೇವಿ ಬಳಗದ ಮಹಿಳೆಯರು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್