Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗದೀಶ್ ಶೆಟ್ಟರ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ: ಗಾಲಿ ಜನಾರ್ಧನ ರೆಡ್ಡಿ

Advertisement
ಬೆಳಗಾವಿ:- ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿದರೆ ಅವರು ಮೋದಿಯವರ ಜೊತೆಗೆ ಸೇರಿ ಕೇಂದ್ರದ ಸಚಿವರಾಗಿ ಬೆಳಗಾವಿಯ ಸಮಗೃ ಅಭಿವೃದ್ಧಿ ಮಾಡುತ್ತಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹೇಳಿದ್ದಾರೆ.‌



ಬುಧವಾರ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ರಾಮದುರ್ಗ ಮತಕ್ಷೇತ್ರದ ಸುರೇಬಾನ ಗ್ರಾಮದಲ್ಲಿ ಜರುಗಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು 6 ಬಾರಿ ಶಾಸಕರಾಗಿ ಎಲ್ಲ ಹುದ್ದೆಗಳ ಅನುಭವ ಅವರಿಗೆ ಇದೆ. ಕಾಂಗ್ರೆಸ್ ಸರ್ಕಾರ ಪೊಳ್ಳು ಗ್ಯಾರಂಟಿಗಳಿಂದ ಅಧಿಕಾರಕ್ಕೆ ಬಂದಿದೆ.‌ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ.‌ ಅನೇಕ ವಸ್ತುಗಳ ಬೆಲೆ ಏರಿಕೆ ಆಗಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಒಬ್ಬ ಮನುಷ್ಯ ಮರಣ ಹೊಂದಿದ ನಂತರ 55% ಆಸ್ತಿ ಸರ್ಕಾರದ ಪಾಲಾಗಲಿದೆ. ಹಾಗಾಗಿ ನಾವು ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಅವರ ಗ್ಯಾರಂಟಿಗಳಿಗೆ ನಾವು ಆಸೆ ಪಟ್ಟರೆ ನಿಮ್ಮ ಆಸ್ತಿ 55% ಕಿತ್ತುಕೊಳ್ಳುತ್ತಾರೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.



ಬಳಿಕ ಮಾತನಾಡಿದ ಶಂಕರಪಾಟೀಲ್ ಮುನೆನಕೊಪ್ಪ ಅವರು, ನರೇಂದ್ರ ಮೋದಿವರನ್ನು ಮೂರನೇ ಸಲ ಪ್ರಧಾನಿ ಮಾಡಬೇಕು ಎಂದು ಎಲ್ಲರೂ ತೀರ್ಮಾನಕ್ಕೆ ಬಂದಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಪ್ರಪಂಚದ ಪ್ರತಿಯೊಂದು ಹಳ್ಳಿಯಲ್ಲೂ ಭಾರದ ಮುಂದಿನ ಪ್ರಧಾನಿ ನರೇಂದ್ರ ಮೋದಿಯವರು ಆಗಬೇಕು ಎಂದು ಜನ ಬಯಸಿದ್ದಾರೆ.‌ ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯ ಇದೆ, ಅದೇ ರೀತಿ ನರೇಂದ್ರ ಮೋದಿ ಮೂರನೆ ಸಲ ಪ್ರಧಾನಿ ಆಗುವುದು ಅಷ್ಟೇ ಸತ್ಯ ಇದೆ. ನರೇಂದ್ರ ಮೋದಿ ಪ್ರಧಾನಿಯಾದರೆ ಇಲ್ಲಿಂದ ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಬೇಕು.

ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರು ರಾಜ್ಯಕ್ಕೆ ಅನೇಕ ಕುಡುಗೆ ಕೊಟ್ಟಿದ್ದಾರೆ. ಬರಗಾಲ ಬಂದಾಗ ಹಾಗೂ ಹೆಚ್ಚು ಮಳೆ ಆದಾಗ ರೈತರ ಖಾತೆಗೆ ನೇರವಾಗಿ 25 ಸಾವಿರ ‌ವರ್ಗವಣೆ ಮಾಡಿದ ಕೀರ್ತಿ ಜಗದೀಶ್ ಶೆಟ್ಟರ್ ಹಾಗೂ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಬರಗಾಲ ಬಂದರು ರೈತರಿಗೆ ಪರಿಹಾರ ನೀಡಲು ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ಆಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು‌ ಎಂದು ತಿಳಿಸಿದರು.

ಈ ವೇಳೆ ಮಾಜಿ ವಿಧಾನಪರಿಷತ್ ಸದಸ್ಯರಾದ ಎಂ.ಡಿ. ಲಕ್ಷ್ಮೀನಾರಾಯಣ, ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಮಹಾದೇವಪ್ಪ ಯಾದವಾಡ, ರಾಜ್ಯ ನೇಕಾರ ಪ್ರಕೋಷ್ಠ ಸಂಚಾಲಕರಾದ ಬಿ.ಎಸ್.ಸೋಮಶೇಖರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ, ಮಂಡಲ ಅಧ್ಯಕ್ಷರಾದ ರಾಜೇಶ ಬಿಳಗಿ, ಪ್ರಮುಖರಾದ ರಮೇಶ ದೇಶಪಾಂಡೆ, ರೇಣಪ್ಪ ಸೋಮಗೊಂಡ, ಪಿ.ಎಫ್. ಪಾಟೀಲ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ