Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಧ್ಯಾಪಕನೊಂದಿಗೆ ಅಕ್ರಮ ಸಂಬಂಧ ಸುಳ್ಳು ಅಪಪ್ರಚಾರ : ವಿದ್ಯಾರ್ಥಿನಿ ಆತ್ಮಹತ್ಯೆ

Advertisement
ಚಿತ್ರದುರ್ಗ :ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಸುಳ್ಳು ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು, ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ.ವಿದ್ಯಾರ್ಥಿನಿ ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಡೆತ್‌ ನೋಟ್‌ನಲ್ಲಿ ಸ್ಫೋಟಕ ಮಾಹಿತಿ

ಆತ್ಮಹತ್ಯೆಗೂ ಮುನ್ನ ನಿಖಿತಾ ಸುದೀರ್ಘ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಕೆಲವು ಸಹಪಾಠಿ ವಿದ್ಯಾರ್ಥಿನಿಯರು ತನ್ನ ಮಾನಸಿಕ ಕಿರುಕುಳಕ್ಕೆ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದೇ ಈ ನಿರ್ಧಾರಕ್ಕೆ ಪ್ರೇರಣೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ತನಿಖೆ ಮತ್ತು ದೂರು

ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಾಧ್ಯಾಪಕ ರಾಜು ಮತ್ತು ಅವರ ಪತ್ನಿ ಸೇರಿದಂತೆ ಇತರರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ (Abetment of Suicide) ಆರೋಪದಡಿ ಪ್ರಕರಣ ದಾಖಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ