Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಕ್ಷಣದಿಂದಲೇ ಮಾಧ್ಯಮಗಳಲ್ಲಿ ಸೈರನ್ ಸೌಂಡ್ ನಿಲ್ಲಿಸಿ : ಕೇಂದ್ರ ಸರ್ಕಾರ ಆದೇಶ 

Advertisement
ನವದೆಹಲಿ : ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಇದರ ನಡುವೆಯೇ ಸೂಕ್ಷ್ಮವಾದ ಸಲಹೆಯನ್ನು ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ತಿಳಿಸಿದೆ.ಯಾವುದೇ ಮಾಧ್ಯಮಗಳಲ್ಲಿ ಸೈರನ್ ಸೌಂಡ್ ಅನ್ನು ತಮ್ಮ ಕಾರ್ಯಕ್ರಮದಲ್ಲಿ ಬಳಸದಂತೆ ಆದೇಶಿಸಿದೆ.

ಸಮುದಾಯ ಜಾಗೃತಿ ಅಭಿಯಾನಗಳನ್ನು ಹೊರತುಪಡಿಸಿ, ತಮ್ಮ ಕಾರ್ಯಕ್ರಮಗಳಲ್ಲಿ ನಾಗರಿಕ ರಕ್ಷಣಾ ವಾಯುದಾಳಿ ಸೈರನ್‌ಗಳ ಸೌಂಡ್​​​​​​​​ಗಳನ್ನು ಬಳಸದಂತೆ ಕೇಂದ್ರ ಗೃಹ ಸಚಿವಾಲಯ ಸಲಹೆ ನೀಡಿದೆ.

ಶುತ್ರುರಾಷ್ಟ್ರ ಪಾಕಿಸ್ತಾನ ಪದೇ ಪದೇ ಭಾರತವನ್ನು ಕೆಣಕುವ ದುಸ್ಸಾಹವನ್ನ ಮುಂದುವರಿಸಿದೆ. ಕಳೆದ ರಾತ್ರಿಯೂ ಸೆಡೆ ಪಾಕಿಸ್ತಾನ ಭಾರತದ 3 ರಾಜ್ಯಗಳನ್ನು ಟಾರ್ಗೆಟ್ ಮಾಡಿದ್ದು, ಪಾಕ್ ಡ್ರೋನ್ಗಳಿಗೆ ಮಣ್ಣು ಮುಕ್ಕಿಸಿದ ಭಾರತ ಪಾಪಿಸ್ತಾನಕ್ಕೆ ಕಳೆದ ರಾತ್ರಿಯೇ ತಕ್ಕ ಶಾಸ್ತಿ ಮಾಡಿದೆ. ಇದರ ಮಧ್ಯೆ ಮಾಧ್ಯಮಗಳಿಗೆಂದೇ ಕೇಂದ್ರ ಗೃಹ ಇಲಾಖೆ ಕೆಲ ಸೂಚನೆ ನೀಡಿದೆ.

ಗಡಿಯಲ್ಲಿ ಭಾರತ-ಪಾಕ್ ನಡುವೆ ಉದ್ವಿಗ್ನತೆ ನೆಲೆಸಿರುವುದರಿಂದ ರಕ್ಷಣಾ ಪಡೆಗಳ ಕಾರ್ಯಾಚರಣೆಗಳು ಹಾಗೂ ಭದ್ರತಾಪಡೆಗಳ ಚಲನವಲನಗಳ ಕುರಿತು ನೇರ ಪ್ರಸಾರ ಮಾಡಬಾರದು.

ಸೇನಾ ಕಾರ್ಯಾಚರಣೆಗಳ ಬಗ್ಗೆ LIVE ಕವರೇಜ್ ಮಾಡಬೇಡಿ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಎಲ್ಲಾ ಮಾಧ್ಯಮಸಂಸ್ಥೆಗಳು, ಡಿಜಿಟಲ್ ಪ್ಲಾಟ್‌ಫಾರಂಗಳು ಹಾಗೂ ವರದಿಗಾರರಿಗೆ ಸೂಚನೆ ನೀಡಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಎಚ್ಚರಿಕೆ ನೀಡಿರುವ ಕೇಂದ್ರ ರಕ್ಷಣಾ ಸಚಿವಾಲಯ, ಸೂಕ್ಶ್ಮವಾದ ಮಾಹಿತಿಗಳನ್ನು ಬಹಿರಂಗಪಡಿಸುವುದರಿಂದ ಯೋಧರು, ಸೇನಾ ಕಾರ್ಯಾಚರಣೆಗಳಿಗೆ ತೊಂದರೆಯಾಗಲಿದೆ ಎಂದು ಹೇಳಿದೆ.

ಕಾರ್ಗಿಲ್ ಯುದ್ಧ, 26/11 ಮುಂಬೈ ಭಯೋತ್ಪಾದಕ ದಾಳಿ ಹಾಗೂ ಕಂದಹಾರ್ ವಿಮಾನ ಅಪಹರಣ ಪ್ರಕರಣ ಸಮಯದಲ್ಲಿ ಮಾಧ್ಯಮಗಳ ವರದಿಯಿಂದ ಸಿಕ್ಕಾಪಟ್ಟೆ ಸಮಸ್ಯೆಯಾಗಿತ್ತು. ಆದ್ದರಿಂದ ಮತ್ತದೇ ತಪ್ಪು ಮರುಕಳಿಸದಂತೆ ನೋಡಿಕೊಳ್ಳಿ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ