Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದು ಸಂಜೆ ಪ್ರಿಯತಮನ ವರಸಿದ ಹುಡುಗಿ 

Advertisement
ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ನಡೆಯಬೇಕಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ರದ್ದಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಆದರೆ, ಸಂಜೆಯ ವೇಳೆಗೆ ಆ ದಿನವೇ ಗಣೇಶನ ದೇವಸ್ಥಾನದಲ್ಲಿ ಪಲ್ಲವಿ ಎಂಬ ಯುವತಿ ತನ್ನ ಪ್ರಿಯಕರ ರಘುವಿನ ಜೊತೆ ಹಸೆಮಣೆ ಏರಿದ ಘಟನೆ ಎಲ್ಲರ ಗಮನ ಸೆಳೆಯಿತು.

ಬೆಳಗ್ಗೆ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿಯ ಮದುವೆ ಒಂದು ಯುವಕನ ಜೊತೆ ಆಗಬೇಕಿತ್ತು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ತಳಿರು ತೋರಣಗಳಿಂದ ಮಂಟಪವನ್ನು ಅಲಂಕರಿಸಲಾಗಿತ್ತು, ಆರತಕ್ಷತೆಗೆ ಸಕಲ ಸಿದ್ಧತೆಗಳು ಮಾಡಲಾಗಿತ್ತು.

ಆದರೆ, ವಧುವಾದ ಪಲ್ಲವಿ ತಾನು ಪ್ರೀತಿಸದ ಯುವಕನೊಂದಿಗೆ ಜೀವನ ಕಟ್ಟಿಕೊಳ್ಳಲು ಒಪ್ಪದ ಆಕೆ ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ್ದಳು. ಈ ನಿರ್ಧಾರ ಕುಟುಂಬಸ್ಥರಿಗೆ ಆಘಾತವನ್ನುಂಟುಮಾಡಿತ್ತು.

ಪಲ್ಲವಿಯ ಈ ಧೈರ್ಯದ ನಿರ್ಧಾರದ ಹಿಂದೆ ಒಂದು ಸುಂದರವಾದ ಪ್ರೀತಿಯ ಕತೆ ಇತ್ತು. ರಘು ಎಂಬ ಯುವಕನನ್ನು ಆಕೆ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದಳು.

ಆದರೆ, ಕುಟುಂಬದ ಒತ್ತಡದಿಂದಾಗಿ ಆಕೆಯ ಪ್ರೀತಿಯ ವಿಷಯ ಮುಚ್ಚಿಟ್ಟಿದ್ದಳು. ಆದರೆ ವಿವಾಹದ ದಿನ ನಿಶ್ಚಯ ಮಾಡಿದ್ದ ವರನೊಂದಿಗೆ ಮದ್ವೆ ರದ್ದುಗೊಳಿಸಿ ತನ್ನ ಪ್ರೀತಿಯ ವಿಚಾರ ಕುಟುಂಬದವರಿಗೆ ತಿಳಿಸಿದಳು.

ಸಂಜೆಯ ವೇಳೆಗೆ, ಗಣೇಶನ ದೇವಸ್ಥಾನದಲ್ಲಿ ಒಂದು ಸರಳವಾಗಿ ವಿವಾಹ ಸಮಾರಂಭ ನಡೆಯಿತು. ಹಿಂದೂ ಸಂಪ್ರದಾಯದಂತೆ, ಜಲ ಮತ್ತು ಅಗ್ನಿಯ ಸಾಕ್ಷಿಯೊಂದಿಗೆ ಪಲ್ಲವಿ ಮತ್ತು ರಘು ತಾಳಿ ಕಟ್ಟಿಕೊಂಡು ಸಪ್ತಪದಿ ತುಳಿದರು. ಕುಟುಂಬಸ್ಥರು, ಆರಂಭದಲ್ಲಿ ಆಘಾತಕ್ಕೊಳಗಾದರೂ, ಕೊನೆಗೆ ಪಲ್ಲವಿಯ ಪ್ರೀತಿಯನ್ನು ಕುಟುಂಬದವರು ಒಪ್ಪಿಕೊಂಡರು.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ