Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಪದ್ಮಾವತಿ ಸಂಯುಕ್ತ ಪದವಿ ಪೂರ್ವ ಮಹಾವಿ ದ್ಯಾಲಯ ಉದ್ಘಾಟನೆ

Advertisement
ಐನಾಪುರ:-ಜಗತ್ತಿನಲ್ಲಿ ಹಣವಿದ್ದರೇ ಪ್ರಯೋಜನವಿಲ್ಲ, ಯಾವ ವ್ಯಕ್ತಿ ಜ್ಞಾನ ಹೊಂದಿರುತ್ತಾನೆ ಅವನೇ ನಿಜವಾದ ಶ್ರೀಮಂತ ಎಂದು ಐನಾಪುರ ಗುರುದೇವಾಶ್ರಮದ ಬಸವೇಶ್ವರ ಮಹಾಸ್ವಾಮಿಗಳು ನುಡಿದರು.

ತಾಲೂಕಿನ ಐನಾಪುರ ಪಟ್ಟಣದಲ್ಲಿ ಮಂಗಳವಾರ ನೂತನ ಪದ್ಮಾವತಿ ಸಂಯುಕ್ತ ಪದವಿ ಪೂರ್ವ ಮಹಾವಿ ದ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾ ರದೆಂಬ ದೃಷಿಯಿಂದ ಮಹಾದಾನಿ ಮಹಾವೀರ ಪಡನಾಡ ಅವರು ರಾಜ್ಯದ ವಿವಿಧ ಮೂಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ದಾನವನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳ ಪಾಲಿಗೆ ದೇವರಾಗಿದ್ದಾರೆ ಎಂದರು.

ದೇಶದಲ್ಲಿ ಹಲವಾರು ಜನರು ಸಾವಿರಾರು ಕೋಟಿ ಒಡೆಯರಿದ್ದಾರೆ. ಆದರೆ, ಅವರು ಶ್ರೀಮಂತರಲ್ಲ, ಯಾರು ಆರ್ಥಿಕವಾಗಿ ಕಷ್ಟದಲ್ಲಿದ್ದಾರೋ ಅಂಥವರ ಭಾವನೆಗಳಿಗೆ ಸ್ಪಂದಿಸಿ ಹಂಚಿ ತಿನ್ನುವ ಗುಣ ಯಾರಲ್ಲಿರುತ್ತದೆಯೋ ಅವರೇ ನಿಜವಾದ ಶ್ರೀಮಂತರು. ಅಂಥ ಗುಣಗಳನ್ನು ಮಹಾವೀರ ಪಡನಾಡ ಹೊಂದಿದ್ದಾರೆ ಎಂದರು.

ದಾನ ಶೂರ ಮಹಾವೀರ ಪಡನಾಡ ಮಾತನಾಡಿ, ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಪದ್ಮಾವತಿ ಶಿಕ್ಷಣ ಸಂಸ್ಥೆ ಯರು ಪಪೂ ಮಹಾವಿದ್ಯಾಲಯವನ್ನು ಪ್ರಾರಂಭಿಸಿದ್ದಾರೆ. ಇದಕ್ಕೆ ಆರ್ಥಿಕ ತೊಂದರೆ ಬಂದರೆ ನಾನು ಸಹಾಯ ಮಾಡಲು ಸದಾ ಸಿದ್ಧ ಎಂದು ವಾಗ್ದಾನ ನೀಡಿದರು.

ಸಂಸ್ಥೆಯ ಉಪಾಧ್ಯಕ್ಷ ಸಂಜಯಕುಚನೂರೆ ಮಾತನಾಡಿ, ಕೇವಲ ದೊಡ್ಡ ಕಟ್ಟಡ ನಿರ್ಮಾಣ ಮಾಡಿ ಹವಾ ನಿಯಂತ್ರಿತ ಕೊಠಡಿಗಳನ್ನು ನಿರ್ಮಿಸಿದರೇ ಸಾಲದು ಇಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕು. ಅಂಥ ಕಾರ್ಯ ನಮ್ಮ ಸಂಸ್ಥೆ ಮಾಡುತ್ತಿದೆಂದು ಮಹಾವೀರ ಪಡನಾಡ ಅವರು ಈಗಾಗಲೇ ನಮ್ಮ ಸಂಸ್ಥೆಗೆ ₹50 ಲಕ್ಷ ದೇಣಿಗೆ ನೀಡಿದ್ದು, ಮತ್ತೆ ಆರ್ಥಿಕ ತೊಂದರೆ ಬಂದರೇ ಸಹಾಯ ಮಾಡುವ ಭರವಸೆ ನೀಡಿದ್ದು ನೋಡಿದರೇ ಅವರಿಗಿರುವ ಶಿಕ್ಷಣ ಪ್ರೇಮ ಎದ್ದು ಕಾಣುತ್ತದೆ ಎಂದು ಬಣ್ಣಿಸಿದರು.

ಸಂಸ್ಥೆಯ ಅಧ್ಯಕ್ಷ ದಶರಥ ತೆರದಾಳೆ ಅಧ್ಯಕ್ಷತೆ ವಹಿಸಿದ್ದರು. ಕಚೇರಿ ಉದ್ಘಾಟನೆಯನ್ನು ಸಂಸ್ಥೆಯ ಸಂಸ್ಥೆಯ ಉಪಾಧ್ಯಕ್ಷ ಖ್ಯಾತ ನ್ಯಾಯವಾದಿ ಸಂಜಯ ಕುಚನೂ ನೆರವೇರಿಸಿದರು. ಪ್ರಾಚಾರ್ಯ ಕೆ.ಜೆ.ಮಾನಗಾಂವೆ, ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತಿ ಸದಸ್ಯರಾದ ಬಿಜೆಪಿ ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೇಟಿ ಪಪಂ ಸದಸ್ಯ ಪ್ರವೀಣ ಗಾಣಿಗೇರ, ಮುಖಂಡರಾದ ಯಶವಂತ ಪಾಟೀಲ, ಪ್ರಕಾಶ ಚಿನಗಿ, ಸಂತೋಷ ಪಾಟೀಲ, ಆಡಳಿತ ಮಂಡಳಿಯ ಸದಸ್ಯರಾದ ರವೀಂದ್ರ ಬಣಜವಾಡ, ಗಜಕುಮಾರ ಪಾಟೀಲ ಪ್ರಮೋದ ಲಿಂಬಿಕಾಯಿ, ಬಾಪುಸಾಬ ಪಾಟೀಲ, , ರಾವಸಾಬ ಕುಚನೂರೆ, ವಸಂತ ಹುದ್ದಾರ, ಸಿದ್ಧಾಂತ ಬಣಜವಾಡ, ಮಹಾವೀರ ಪಾಟೀಲ, ಜಿನ್ನಪ್ಪ ತೆರದಾಳೆ, ಜಯಕುಮಾರ ಪಾಟೀಲ, ಮಹಾವೀರ ಲಿಂಬಿಕಾಯಿ, ಮೋಹನ ಪಾಟೀಲ, ಭರತೇಶ ತೇರದಾಳೆ, ಶಾಂತಿನಾಥ ಪಾಟೀಲ, ಸಂತೋಷ ತೇರದಾಳೆ ಇತರರು ಇದ್ದರು.

ವರದಿ: ಮುರಗೇಶ ಗಸ್ತಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ