Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಚಕ ಘಟದತ್ತ ಭಾರತ- ಇಂಗ್ಲೆಂಡ್ ಟೆಸ್ಟ್

Advertisement
ಲಾಡ್ಸ್ (ಲಂಡನ್): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.

ಕ್ರಿಕೆಟ್ ಕಾಶಿ ಖ್ಯಾತಿಯ ಐತಿಹಾಸಿಕ ಮೈದಾನದಲ್ಲಿ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಮುಗಿದಾಗ ಭಾರತ ತನ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಗೆ 58 ರನ್ ಗಳಿಸಿದ್ದು, ಉಳಿದ 6 ವಿಕೆಟ್ ಗಳಿಂದ ಗೆಲ್ಲಲು ಇನ್ನು 135 ರನ್ ಗಳನ್ನು ಗಳಿಸಬೇಕಿದೆ. ದಿನದಾಟ ಮುಗಿದಾಗ ಕೆ.ಎಲ್. ರಾಹುಲ್ 33 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರು.

ಇಂಗ್ಲೆಂಡ್ ತಂಡ ತನ್ನ ದ್ವಿತೀಯ ಸರದಿಯಲ್ಲಿ 192 ರನ್ ಗೆ ಆಲೌಟಾಗಿದ್ದರಿಂದ ಭಾರತಕ್ಕೆ 193 ರನ್ ಗಳ ಗೆಲುವಿನ ಸಿಕ್ಕಿತು. ಭಾರತ ತಂಡದ ಬೌಲರುಗಳು ಇಂಗ್ಲೆಂಡ್ ನ ದ್ವಿತೀಯ ಸರದಿಯಲ್ಲಿ ಉತ್ತಮ ಬೌಲಿಂಗ್ ನಿರ್ವಹಿಸಿದ್ದರಿಂದ ಭಾರತ ತಂಡಕ್ಕೆ ಸುಲಭ ಗುರಿ ಸಿಕ್ಕಿತ್ತು. ಆದರೆ ದ್ವಿತೀಯ ಸರದಿಯಲ್ಲಿ ಭಾರತ ತಂಡ ಯಶಸ್ವಿ ಜೈಸ್ವಾಲ್, ಕರುಣ್ ನಯ್ಯರ, ನಾಯಕ ಶುಭಮಾನ್ ಗಿಲ್ ಹಾಗೂ ರಾತ್ರಿ ಕಾವಲುಗಾರ ಆಕಾಶ ದೀಪ್ ಅವರ ವಿಕೆಟ್ ಗಳನ್ನು ಬೇಗನೆ ಒಪ್ಪಿಸಿದ್ದರಿಂದ ಪಂದ್ಯ ರೋಚಕ ಘಟ್ಟ ತಲುಪುವಂತಾಗಿದೆ. ಆದಾಗ್ಯೂ ಪಂದ್ಯ ಗೆಲ್ಲಲು ಈಗ ಭಾರತವೇ ಪೆವರಿಟ್ ಎನಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಸ್ಕೋರ್ ವಿವರ:

ಭಾರತ ಮೊದಲ ಇನ್ನಿಂಗ್ಸ್ 387

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 387

ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್ 192 ( ವಾಷಿಂಗ್ಟನ್ ಸುಂದರ 22 ಕ್ಕೆ 4)

ಭಾರತ ದ್ವಿತೀಯ ಇನ್ನಿಂಗ್ಸ್ 4 ವಿಕೆಟ್ ಗೆ 58
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ