LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೋಚಕ ಘಟದತ್ತ ಭಾರತ- ಇಂಗ್ಲೆಂಡ್ ಟೆಸ್ಟ್

Advertisement
ಲಾಡ್ಸ್ (ಲಂಡನ್): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ.

ಕ್ರಿಕೆಟ್ ಕಾಶಿ ಖ್ಯಾತಿಯ ಐತಿಹಾಸಿಕ ಮೈದಾನದಲ್ಲಿ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಮುಗಿದಾಗ ಭಾರತ ತನ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಗೆ 58 ರನ್ ಗಳಿಸಿದ್ದು, ಉಳಿದ 6 ವಿಕೆಟ್ ಗಳಿಂದ ಗೆಲ್ಲಲು ಇನ್ನು 135 ರನ್ ಗಳನ್ನು ಗಳಿಸಬೇಕಿದೆ. ದಿನದಾಟ ಮುಗಿದಾಗ ಕೆ.ಎಲ್. ರಾಹುಲ್ 33 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರು.

ಇಂಗ್ಲೆಂಡ್ ತಂಡ ತನ್ನ ದ್ವಿತೀಯ ಸರದಿಯಲ್ಲಿ 192 ರನ್ ಗೆ ಆಲೌಟಾಗಿದ್ದರಿಂದ ಭಾರತಕ್ಕೆ 193 ರನ್ ಗಳ ಗೆಲುವಿನ ಸಿಕ್ಕಿತು. ಭಾರತ ತಂಡದ ಬೌಲರುಗಳು ಇಂಗ್ಲೆಂಡ್ ನ ದ್ವಿತೀಯ ಸರದಿಯಲ್ಲಿ ಉತ್ತಮ ಬೌಲಿಂಗ್ ನಿರ್ವಹಿಸಿದ್ದರಿಂದ ಭಾರತ ತಂಡಕ್ಕೆ ಸುಲಭ ಗುರಿ ಸಿಕ್ಕಿತ್ತು. ಆದರೆ ದ್ವಿತೀಯ ಸರದಿಯಲ್ಲಿ ಭಾರತ ತಂಡ ಯಶಸ್ವಿ ಜೈಸ್ವಾಲ್, ಕರುಣ್ ನಯ್ಯರ, ನಾಯಕ ಶುಭಮಾನ್ ಗಿಲ್ ಹಾಗೂ ರಾತ್ರಿ ಕಾವಲುಗಾರ ಆಕಾಶ ದೀಪ್ ಅವರ ವಿಕೆಟ್ ಗಳನ್ನು ಬೇಗನೆ ಒಪ್ಪಿಸಿದ್ದರಿಂದ ಪಂದ್ಯ ರೋಚಕ ಘಟ್ಟ ತಲುಪುವಂತಾಗಿದೆ. ಆದಾಗ್ಯೂ ಪಂದ್ಯ ಗೆಲ್ಲಲು ಈಗ ಭಾರತವೇ ಪೆವರಿಟ್ ಎನಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಸ್ಕೋರ್ ವಿವರ:

ಭಾರತ ಮೊದಲ ಇನ್ನಿಂಗ್ಸ್ 387

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 387

ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್ 192 ( ವಾಷಿಂಗ್ಟನ್ ಸುಂದರ 22 ಕ್ಕೆ 4)

ಭಾರತ ದ್ವಿತೀಯ ಇನ್ನಿಂಗ್ಸ್ 4 ವಿಕೆಟ್ ಗೆ 58
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ