Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಭಾರತ ಸುಭದ್ರ: ಜಿ.ಪಲ್ಲವಿ

Advertisement
ಬೆಂಗಳೂರು : ಸರ್ವ ಜನಾಂಗವನ್ನು ಸಮ ದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ.ಬಾಬಾಹಾಹೇಬ ಅಂಬೇಡ್ಕರ್ ಅವರು ರಚಿಸಿ ಕೊಟ್ಟರು ಜೊತೆಗೆ ನಮ್ಮ ಕತ್ಯವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ ಅದೇ ರೀತಿ ಬಾಬು ಜಗಜೀವನರಾಮ್ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.
ಅವರು ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿಯಲ್ಲಿ ಅಹಿಂದ ರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಡಾ. ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118ನೇ ಜಯಂತಿ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ, ಕಾರ್ಯಾಧ್ಯಕ್ಷ ಕರುಣ ಶೀಲ ಮೌರ್ಯ, ಗೌರವಾಧ್ಯಕ್ಷ ಟಿ.ತಿಮ್ಮಣ್ಣ, ಡಾ. ಬಿರಾದಾರ್, ಮಂಜುನಾಥ್ ಟ್ರಾವೆಲ್ಸ್, ವಿ. ನಾಗರಾಜ್, ಕೇಶವಮೂರ್ತಿ, ಹರೀಶ್ ಗೌಡ್ರು, ಹೆಗ್ಗನಹಳ್ಳಿ ಡಿಎಸ್ಎಸ್ ಮೂರ್ತಿ, ಇವರೆಲ್ಲರು ಡಾ. ಅಂಬೇಡ್ಕರ್ ಅವರ ರಚಿಸಿದ ಸಂವಿಧಾನ ಕುರಿತು ಮಾತನಾಡಿದರು.
ಅಹಿಂದ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ ವೈ ಜಿ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು.
ಖ್ಯಾತ ಜಾನಪದ ಕಲಾವಿದ ಕುಣಿಗಲ್ ರಾಮಚಂದ್ರ ಸ್ವಾಗತ, ನಿರೂಪಣೆ ಮತ್ತು ಮನರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಭೀಮ ಪುತ್ರಿ ಬ್ರಿಗೇಡ್ ಸಂಸ್ಥಾಪಕಿ ರಾಜ್ಯಾಧ್ಯಕ್ಷೆ ರೇವತಿ ರಾಜ್, ರಾಜಗೋಪಾಲನಗರ ವಾರ್ಡಿನ ಬಿಜೆಪಿ ಮುಖಂಡ ದಿನೇಶ್, ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ನಾಗರಾಜ್, ಶ್ರೀಕಾಂತ್, ಕಾಂಗ್ರೆಸ್ ಮಹಿಳಾ ಮುಖ್ಯಸ್ಥೆ ಹೇಮಾ ರಾಜೇಂದ್ರ, ರಮಾಬಾಯಿ ಸಂಸ್ಥಾಪಕಿ ರಾಜ್ಯಾಧ್ಯಕ್ಷೆ ಗಿರಿಜಾ, ಅಹಿಂದ ರಕ್ಷಣಾ ವೇದಿಕೆ ರಾಜ್ಯ ಸಮಿತಿ ,ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಸ್ಥಳೀಯ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ