Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ವೈಭವ ದಿನಪತ್ರಿಕೆ ವರದಿ ಫಲಶ್ರುತಿ : ಸೆ.09 ರಂದು ತುರುವೇಕೆರೆಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Advertisement
ತುರುವೇಕೆರೆ : ಪಟ್ಟಣದ ಮಿನಿವಿಧಾನಸೌಧದ ಹಿಂಭಾಗ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು, ಸೆಪ್ಟಂಬರ್ 09 ರಂದು ಬೆಳಿಗ್ಗೆ 10.30 ಕ್ಕೆ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಯಾಗಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ತುರುವೇಕೆರೆಯಲ್ಲಿ ಮಾತ್ರ ಉದ್ಘಾಟನೆಯಾಗಿಲ್ಲ ಎಂಬ ಬಗ್ಗೆ ಭಾರತ ವೈಭವ ದಿನಪತ್ರಿಕೆ ಆಗಸ್ಟ್ 30 ರಂದು ಡಾ.ಜಿ.ಪರಮೇಶ್ವರ್ ಡೇಟ್ ಕೊಟ್ರೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ..? ಎಂಬ ಶೀರ್ಷಿಕೆಯಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ವಿಳಂಬಕ್ಕೆ ಸಚಿವರು ದಿನಾಂಕ ನೀಡಿಲ್ಲ ಎಂಬ ಪಪಂ ಮುಖ್ಯಾಧಿಕಾರಿಗಳ ಹೇಳಿಕೆನ್ನಾಧರಿಸಿ ವಿಸೃತ ವರದಿ ಮಾಡಿತ್ತು. ಈ ವರದಿಗೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಶೀಘ್ರ ಸ್ಪಂದಿಸಿದ್ದು, ದಿನಾಂಕ ನಿಗದಿಪಡಿಸಿದ್ದಾರೆ. ಇದು ಪತ್ರಿಕೆಯ ವರದಿಗೆ ಹಾಗೂ ಪತ್ರಿಕೋದ್ಯಮಕ್ಕೆ ಸಂದ ಜಯವಾಗಿದೆ.

ಬಡವರು, ಕೂಲಿಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರು ಹಸಿವಿನಿಂದ ಬಳಲಬಾರದೆನ್ನುವ ಉದ್ದೇಶವನ್ನಿಟ್ಟುಕೊಂಡು ಅತಿ ಕಡಿಮೆ ದರದಲ್ಲಿ ತಿಂಡಿ, ಊಟ ಕೊಡುವ ಯೋಜನೆಯನ್ನು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್ ಅನ್ನು 2014 ರಲ್ಲಿ ಸಿದ್ದರಾಮಯ್ಯನವರು ಘೋಷಿಸಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದರು. ಆದರೆ ರಾಜ್ಯದ ಬಹುತೇಕ ಕಡೆ ಇಂದಿರಾ ಕ್ಯಾಂಟೀನ್ ಪ್ರಾರಂಭಗೊಂಡರೂ ತುರುವೇಕೆರೆಯಲ್ಲಿ ಮಾತ್ರ ಸ್ಥಳಾವಕಾಶ, ಜಾಗದ ಸಮಸ್ಯೆ ಹಾಗೂ ತಾಂತ್ರಿಕ ಕಾರಣಗಳ ಕಾರಣದಿಂದ ಸರ್ಕಾರದ ಅವಧಿ ಮುಗಿದರೂ ಆಗಲೇ ಇಲ್ಲ. ನಂತರದ ಸರ್ಕಾರಗಳು ಇಂದಿರಾ ಕ್ಯಾಂಟೀನ್ ಬಗ್ಗೆ ಆಸಕ್ತಿ ವಹಿಸಿರಲಿಲ್ಲ.

ಈಗ 2023 ರಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು, ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾದರು. ಎಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಿಲ್ಲವೋ ಅಲ್ಲಿ ಶೀಘ್ರ ಸ್ಥಳ ಗುರುತಿಸಿ ಪ್ರಾರಂಭಿಸಬೇಕೆಂದು ಆದೇಶಿಸಿದ್ದ ಹಿನ್ನೆಲೆಯಲ್ಲಿ ಪಟ್ಟಣದ ೩-೪ ಕಡೆ ಕ್ಯಾಂಟೀನ್ ಪ್ರಾರಂಭಕ್ಕೆ ಸ್ಥಳ ಗುರುತಿಸಲಾಗಿತ್ತು. ಆದರೆ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ನಿಗದಿಪಡಿಸಿದಷ್ಟೇ ಸ್ಥಳ ಬೇಕಿದ್ದ ಕಾರಣ ತಹಸೀಲ್ದಾರ್ ಅವರು ತಾಲ್ಲೂಕು ಕಛೇರಿ ಹಿಂಭಾಗ ಸ್ಥಳ ನೀಡಿದ್ದು, ಕಟ್ಟಡ ನಿರ್ಮಾಣವಾಗಿದೆ. ಅಲ್ಲದೆ ಆಹಾರ ತಯಾರಿಕೆಗೆ ಬೇಕಾದ ಪಾತ್ರಾ ಸಾಮಾನುಗಳು, ಅಗತ್ಯ ಸೌಲಭ್ಯಗಳು ಸಿದ್ದವಾಗಿದ್ದು ಉದ್ಘಾಟನೆ ಮಾತ್ರ ಆಗಬೇಕಿದೆ. ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾದರೆ ಬೆಳಿಗ್ಗೆ 5 ರೂಗಳಿಗೆ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ 10 ರೂಗಳಿಗೆ ಊಟ ದೊರೆಯಲಿದೆ.

ಒಟ್ಟಾರೆ ಬಡವರು, ಕೂಲಿಕಾರ್ಮಿಕರು, ವ್ಯಾಪಾರಸ್ಥರಿಗೆ ಕಡಿಮೆ ದರದಲ್ಲಿ ತಿಂಡಿ, ಊಟ ನೀಡುವ ಇಂದಿರಾ ಕ್ಯಾಂಟೀನ್ ಭಾಗ್ಯ ತುರುವೇಕೆರೆಯಲ್ಲೂ ಪ್ರಾರಂಭವಾಗಲು ಕಾರಣವಾದ ಭಾರತ ವೈಭವ ಪತ್ರಿಕೆ ವರದಿಗೆ ನಾಗರೀಕರು ಧನ್ಯವಾದ ಅರ್ಪಿಸಿದ್ದಾರೆ. ಪತ್ರಿಕಾ ವರದಿಗೆ ಶೀಘ್ರ ಸ್ಪಂದಿಸಿ ದಿನಾಂಕ ನಿಗದಿಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್, ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯ್ತಿಗೆ ಪತ್ರಿಕೆ ಆಭಾರಿಯಾಗಿದೆ.

ವರದಿ : ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್