LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇನ್ಮುಂದೆ ಓಲಾ, ಉಬರ್ ಆಯಪ್ ರೀತಿಯಲ್ಲಿ ಆಂಬ್ಯುಲೆನ್ಸ್ ಸೇವೆ

Advertisement
ಬೆಂಗಳೂರು : ಓಲಾ, ಉಬರ್ ಆಯಪ್ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್ ಸೇವಾ ಗ್ರಾಹಕರಿಗೂ ನೀಡಬೇಕಿದೆ.

ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು ಕೂಡ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು.

ಮುಂದೆ ಈ ವಾಹನಗಳು ಡಿಸಿ, ಸಿಇಒ, ಡಿಎಚ್‌ಒ ಕಂಟ್ರೋಲ್ನಲ್ಲಿ ಇರಲಿವೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಮುಂದಿನ ಅಧಿವೇಶನದಲ್ಲಿ ಈ ಕುರಿತಾದ ಮಸೂದೆ ಮಂಡಿಸಲಾಗುವುದು. ಆಯಪ್ ನಲ್ಲಿಯೇ ಆಂಬುಲೆನ್ಸ್ ಬುಕಿಂಗ್ ಗೆ ಅವಕಾಶ ಕಲ್ಪಿಸಲಾಗುವುದು.

ರಾಜ್ಯದಲ್ಲಿ ಅನೇಕ ಕಂಪನಿಗಳು ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದು, ಅವುಗಳ ಬಗ್ಗೆ ಸಾಕಷ್ಟು ದೂರುಗಳಿವೆ. ಹೀಗಾಗಿ ಆಂಬುಲೆನ್ಸ್ ಗಳಲ್ಲಿ ಯಾವ ವ್ಯವಸ್ಥೆ ಇರಬೇಕು. ದರ ಎಷ್ಟಿರಬೇಕು ಎಂಬುದನ್ನು ಸರ್ಕಾರದಿಂದ ಕಾಯ್ದೆ ರೂಪಿಸಲಾಗುವುದು.

ಶಾಸನ ಜಾರಿಯಾದ ನಂತರ ಆಂಬುಲೆನ್ಸ್ ಸೇವೆ ಒದಗಿಸುವವರು ಖಾಸಗಿ ಆಸ್ಪತ್ರೆಗಳ ರೀತಿ ನೋಂದಣಿ ಮಾಡಿಕೊಳ್ಳಬೇಕು. ಆಂಬುಲೆನ್ಸ್ ಗಳಿಗೆ ಸೇವೆಯ ಆಧಾರದಲ್ಲಿ ಸರ್ಕಾರವೇ ದರ ನಿಗದಿ ಮಾಡಲಿದೆ. ಆಯಪ್ ನಲ್ಲಿ ಬುಕ್ ಮಾಡಬೇಕಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ ಡೌಟ್ಕ್ರಿಕೆಟರ್ ಜತೆ ಡೇಟಿಂಗ್ ವದಂತಿ ತಳ್ಳಿ ಹಾಕಿದ ನಟಿ ಮೃನಾಲ್ ಥಾಕೂರ್ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ