ಕೂಡಲೇ ಬಿ,ಅರ್,ಪಿ ಮತ್ತು ಸಿ,ಆರ್,ಪಿ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿ ಸ್ವಚ್ಛತೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಶಾಲೆಯ ಹಿಂಬಾಗದಲ್ಲಿ ಸರಕಾರಿ ಸ್ಥಳವಾಗಿದ್ದು ಅದನ್ನು ಮಕ್ಕಳಿಗೆ ಆಟದ ಮೈದಾನ ಮಾಡಿಕೊಡಬೇಕು ಎಂದು ಮತ್ತೊಮ್ಮೆ ಮನವಿ ಮಾಡಲಾಯಿತು.
ಈ ಎಲ್ಲಾ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಸಬಾಪ್ಪ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಂಸಿ ಉಪಾಧ್ಯಕ್ಷರಾದ ನರೇಶ್ ಪಂದುಲ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ಮುಧೋಳ್ ವಲಯ ಅಧ್ಯಕ್ಷರಾದ ಸಬಪ್ಪ ಅಬ್ಬಗಳ, ಸಿ,ಆರ್,ಪಿ ಸಾಯಿಬಣ್ಣ ಪೂಜಾರಿ, ಗ್ರಾಮ ಪಂಚಾಯತ್ ಅಧಿಕಾರಿಗಳಾದ ರಾಮಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್

