Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ವಿಶ್ವ ಗ್ರಾಹಕರ ದಿನಾಚರಣೆ

Advertisement
ಸಿರುಗುಪ್ಪ : ನಗರದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಛೇರಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಜೆ.ಎಮ್.ಎಫ್.ಸಿ ಪ್ರಭಾರಿ ನ್ಯಾಯಾಧೀಶರಾದ ಈರಪ್ಪ ಢವಳೇಶ್ವರ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿ ಮಹಿಳೆಯರು ಕುಟುಂಬದ ನಿರ್ವಹಣೆಯಲ್ಲಿ ತ್ಯಾಗ ಮನೋಭಾವದಿಂದ ನಿರ್ವಹಿಸುತ್ತಾ ಬಂದಿದ್ದು ನಾವೆಲ್ಲರೂ ಅವರ ತ್ಯಾಗವನ್ನು ಮನಗಂಡು ಗೌರವಿಸಬೇಕಾಗಿದೆ.

ಗ್ರಾಹಕರು ತಮಗೆ ಕುಂದುಕೊರತೆಗಳಿದ್ದರೆ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
1983 ಮಾರ್ಚ್ 15 ರಂದು ವಿಶ್ವ ಗ್ರಾಹಕರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗಿದೆ.

ಗ್ರಾಹಕರೆಂದರೆ ವ್ಯವಹಾರದಲ್ಲಿ ಬಾಗಿಯಾಗುವರಾಗಿದ್ದು, ಕೊಳ್ಳುವ ಮತ್ತು ಮಾರುವವರ ಮದ್ಯೆ ಸಮಸ್ಯೆಯುಂಟಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಿ ಪರಿಹರಿಸಿಕೊಳ್ಳಬಹುದೆಂದರು.
ಜಂಟಿ ಕಾರ್ಯದರ್ಶಿ ಮಂಗಳ ಅವರು ಮಾತನಾಡಿ ಮಹಿಳೆಯರ ಸಂರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಆದರೆ ದುರುಪಯೋಗ ಮಾಡಿಕೊಳ್ಳಬಾರದು.

ಕುಟುಂಬದಲ್ಲಿನ ಪರಿಸ್ಥಿತಿಯನ್ನು ಕಂಡುಕೊಂಡು ಹಕ್ಕು ಚಲಾಯಿಸುವುದು ಉತ್ತಮವೆಂದರು.
ವಕೀಲರಾದ ಸ್ವರೋಜ ಅವರು ಮಾತನಾಡಿ ಪೋಷಕರು ಹೆಣ್ಣು ಗಂಡೆಂಬ ಬೇಧ ಬಾವ ತೋರದೇ ಬಾಲ್ಯದಿಂದಲೇ ಮಕ್ಕಳ ನಡತೆ, ಸಮಾಜದಲ್ಲಿ ಅವರ ಪಾತ್ರದ ಬಗ್ಗೆ ತಿಳಿಸುವಂತಹ ಕಾರ್ಯ ಮಾಡಬೇಕೆಂದು ತಿಳಿಸಿದರು.
ಇದೇ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕರಾದ ಶಿವರಾಜ್, ನಗರಸಭೆಯ ಅಮರೇಶ, ಸಿ.ಡಿ.ಪಿ.ಓ ಪ್ರದೀಪ್, ವಕೀಲರ ಸಂಘದ ಉಪಾಧ್ಯಕ್ಷ ಎಮ್.ಷರೀಪ್‌ಸಾಬ್, ಕಾರ್ಯದರ್ಶಿ ಶಿವಕುಮಾರ್.ಎಮ್, ಪ್ಯಾನಲ್ ವಕೀಲರಾದ ಎನ್.ಅಬ್ದುಲ್‌ಸಾಬ್, ಟಿ.ವೆಂಕಟೇಶ್‌ನಾಯ್ಕ್, ಮಲ್ಲಿಗೌಡ ಇನ್ನಿತರ ವಕೀಲರು ಹಾಗೂ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ