Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಸಕ್ರಮದಡಿ ಶಾಲೆಗಳ ಮಾನ್ಯತೆಗೆ ಅರ್ಜಿ ಆಹ್ವಾನ

Advertisement
ಬೆಂಗಳೂರು: ಮಾನ್ಯತೆ ಪಡೆಯದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆ ಅಥವಾ ನವೀಕರಣಕ್ಕೆ ಇಂದಿನಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈಗಲೂ ಸಕ್ರಮ ಮಾಡಿಕೊಳ್ಳದಿದ್ದರೆ ನೋಂದಣಿ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮಾನ್ಯತೆ ನವೀಕರಣ ಇಲ್ಲದೇ ಅನೇಕ ವರ್ಷಗಳಿಂದ ಅಕ್ರಮವಾಗಿ ನಡೆಯುತ್ತಿರುವ ರಾಜ್ಯದ ಅನೇಕ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.

ಖಾಸಗಿ ಶಾಲೆಗಳು ಕಾರ್ಯನಿರ್ವಹಿಸಲು ಮಾನ್ಯತೆ ಹೊಂದಿರಬೇಕು. ಕಾಲಕಾಲಕ್ಕೆ ಮಾನ್ಯತೆ ನವೀಕರಿಸಬೇಕು. ಮಾನ್ಯತೆ ನವೀಕರಿಸದೇ ಕಾರ್ಯನಿರ್ವಹಿಸುವ ಶಾಲೆಗಳು ಅಕ್ರಮ ಎಂದು ಪರಿಗಣಿಸಲಾಗುವುದು.

ಇಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸದರೆ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಅಕ್ರಮ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಈಗಲೂ ಸಕ್ರಮ ಮಾಡಿಕೊಳ್ಳದಿದ್ದರೆ ನೋಂದಣಿ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ. 2023 -24 ನೇ ಸಾಲಿನಲ್ಲಿ ಮತ್ತು ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಮಾನ್ಯತೆ ನವೀಕರಿಸಿಕೊಳ್ಳದ ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾನ್ಯತೆ ನವೀಕರಣ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ.

ಒಂದು ಬಾರಿಗೆ ಮಾತ್ರ ಮಾನ್ಯತೆ ನವೀಕರಣದ ಷರತ್ತು ವಿಧಿಸಿ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಈ ಅವಕಾಶ ಬಳಸಿಕೊಂಡು ಶಾಲೆ ಆಡಳಿತ ಮಂಡಳಿಗಳು ಬಾಕಿ ಇರುವ ಅವಧಿಗೆ ಘಟನೋತ್ತರ ಮಾನ್ಯತೆ ಪಡೆಯಲು ಕ್ರಮವಹಿಸುವಂತೆ ತಿಳಿಸಲಾಗಿದೆ.

ಈ ಅವಧಿಯ ನಂತರವೂ ಪ್ರಥಮ ಮಾನ್ಯತೆ ನವೀಕರಣ ಪಡೆಯದ ಖಾಸಗಿ ಶಾಲೆಗಳಿಗೆ ನೋಂದಣಿ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೈಪಿಡಿಯನ್ನು ಮಾನ್ಯತೆ ನವೀಕರಣ ತಂತ್ರಾಂಶದ ಲಾಗಿನ್ ಪುಟದಲ್ಲಿ ಅಳವಡಿಸಲಾಗಿದೆ.

ಅರ್ಜಿ ಸಲ್ಲಿಕೆ ಮತ್ತು ಪರಿಶೀಲನೆ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದಲ್ಲಿ ಅಗತ್ಯ ಮಾಹಿತಿಗಳೊಂದಿಗೆ ಸಮಸ್ಯೆಯನ್ನು ಇ-ಮೇಲ್([email protected]) ಮೂಲಕ ಸಲ್ಲಿಸಬಹುದು.

ಏಪ್ರಿಲ್ 28 ರಿಂದ ಮೇ 13 ರವರೆಗೆ ಅರ್ಜಿ ಸಲ್ಲಿಸಲು ಸಮಯ ನೀಡಲಾಗಿದೆ. ಸ್ವೀಕರಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಲು ಜೂನ್ 17 ಕೊನೆಯ ದಿನವಾಗಿದೆ ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ