LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಐಟಿಐ ಕಲಿತವರಿಗೆ ಎಚ್ ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 

Advertisement
ಹಿಂದೂಸ್ಥಾನ್ ಏರೋನ್ಯಾಟಿಕ್ಸ್ (ಲಿ) ಟೆಕ್ನಿಕಲ್ ಟ್ರೇನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಕಾರ್ ಪೇಂಟರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ ಸಿ ಪ್ರೋಗ್ರಾಮರ್ ಹಾಗೂ ಆಪರೇಟರ್, ಮೆಕಾನಿಕ್ ರೆಫ್ರೀಜರೇಷನ್ ಮತ್ತು ಏರ್ ಕಂಡೀಷನಿಂಗ್ ಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ಟ್ರೇನಿಂಗ್ ತರಬೇತಿ ನೀಡಲಾಗುವುದು.

ಅಸಕ್ತ ಅರ್ಹ ಅಭ್ಯರ್ಥಿಗಳು ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಸನ- ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಈ-ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:

ಐಟಿಐ ತೇರ್ಗಡೆ ಹೊಂದಿರಬೇಕು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ https://apprenticeshipindia.gov.in/candidate-registration ನಲ್ಲಿ ನೋಂದಾಯಿಸಿ ಅರ್ಜಿ ನಮೂನೆಯಲ್ಲಿ ಅಪ್ರೇಂಟಿಸ್ ನೋಂದಣಿ ಸಂಖ್ಯೆ ನಮೂದಿಸುವುದು ಹಾಗೂ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸ್ಟೆöಫಂಡ್( ಸರ್ಕಾರ ನಿಗಧಿಪಡಿಸಿದಂತೆ) ನೀಡಲಾಗುವುದು.

ಭರ್ತಿ ಮಾಡಿದ ಅರ್ಜಿಯನ್ನು ಈ ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 30-09-2025 ಅರ್ಜಿಯೊಂದಿಗೆ ಅಭ್ಯರ್ಥಿಯು ಇತ್ತೀಚಿನ ಪಾಸ್ ಪೋರ್ಟ್ ಆಳತೆಯ ಭಾವ ಚಿತ್ರ ಅಂಟಿಸಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎನ್.ಟಿ.ಸಿ ಸರ್ಟಿಫೀಕೆಟ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ರವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08172-296374 ರಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ