LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿಕನ್ ಗುನ್ಯಾ, ಡೇಘು, ನಂತಹ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ

Advertisement
 -------------------------------------------------------------------ಕಂದಹಳ್ಳಿ ಗ್ರಾಮದ ರಸ್ತೆ ಚರಂಡಿಗಳ ಅವ್ಯವಸ್ಥೆ

ಚಾಮರಾಜನಗರ :ಜಿಲ್ಲೆಯ ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಪಂ ವ್ಯಾಪ್ತಿಯ ಕಂದಹಳ್ಳಿ ಗ್ರಾಮದಲ್ಲಿ ಸಮರ್ಪಕ ಚರಂಡಿ ಇಲ್ಲದಿರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ.



ಚಾಮರಾಜನಗರ, ಕೊಳ್ಳೆಗಾಲದ ಮುಖ್ಯ ರಸ್ತೆಯ NH-948 ರ ಕಂದಹಳ್ಳಿ ಗ್ರಾಮದಲ್ಲಿ ರಸ್ತೆಯ ಎಡ ಮತ್ತು ಬಲ ಭಾಗದಲ್ಲಿ ಐದು ವರ್ಷಗಳಿಂದ ಚರಂಡಿ ನಿರ್ಮಾಣವನ್ನು ಪೂರ್ಣಮಾಡದೇ ತಾರತಮ್ಯ ತೋರುತಿದ್ದಾರೆ.

ಗ್ರಾಮದ ಈ ಚರಂಡಿ ನೀರು ರಸ್ತೆ ಹಾಗೂ ತೆಗ್ಗುಗಳಲ್ಲಿ ಸಂಗ್ರಹವಾಗುತ್ತಿದ್ದು, ಸೊಳ್ಳೆಗಳ ವಾಸಸ್ಥಾನವಾಗಿ ಮಾರ್ಪಟ್ಟು ಚಿಕನ್ ಗುನ್ಯಾ, ಡೇಘು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಜನರನ್ನು ಕಾಡುತ್ತಿದೆ.

ನಾಯಕ ಸಮುದಾಯದ ಹೆಬ್ಬಾಗಿಲಿನ ಮುಂಬಾಗ ಹಾಗೂ ಗ್ರಾಮದ ಶಾಂತರಾಜು, ಬಸವರಾಜು, ಎಂಬುವರ ಮನೆ ಮುಂಭಾಗ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತ ಪರಿಣಾಮ ಹೊಲಸು ನೀರು ಮುಂದೆ ಸಾಗದೆ ಅಲ್ಲಿಯೇ ನಿಂತು ಗಬ್ಬು ವಾಸನೆ ಬೀರುತ್ತಿದೆ. ಜೊತೆಗೆ ಸೊಳ್ಳೆಗಳ ಕಾಟದಿಂದ ಸುತ್ತಲಿನ ಮನೆಗಳ ಜನರು ಬೇಸತ್ತಿದ್ದಾರೆ.

ಚರಂಡಿಗಳಿಲ್ಲದ ಕಾರಣ ಕೆಲ ತಿಂಗಳ ಹಿಂದೆ ವಿಷ ಜಂತುಗಳು ಉತ್ಪತ್ತಿಯಾಗಿ ರೋಗಗಳು ಹರಡಿ ಹಲವರು ಕಾಯಿಲೆಯಿಂದ ಬಳಲಿದ್ದಾರೆ.. ಆದರೆ ಚರಂಡಿ ನಿರ್ಮಾಣ ಈಗ ಅರ್ಧಕ್ಕೆ ನಿಂತಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ.

ಗ್ರಾಪಂ ಅಧಿಕಾರಿಗಳಿಗೆ ಈ ಕುರಿತು ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಗ್ರಾಪಂ ಆಡಳಿತ ಮಂಡಳಿ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಕೂಡಲೇ ಚರಂಡಿ ಕಾಮಗಾರಿಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಪೂರ್ಣಗೊಳಿಸಿ ನೆಮ್ಮದಿ ಜೀವನ ಸಾಗಿಸಲು ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಚಾಮರಾಜನಗರ, ಕೊಳ್ಳೆಗಾಲದ ಮುಖ್ಯ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕಂದಹಳ್ಳಿ ಗ್ರಾಮದ ರಮೇಶ್ , ಶಂಕರ್ ನಾಯಕ, ನಂಜುಂಡ ನಾಯಕ, ಮಹದೇವ ನಾಯಕ, ದೀಪಕ್, ಮಲ್ಲೇಶ, ಮಹೇಶ್, ಸೇರಿದಂತೆ ಮತ್ತಿತರರು ಆಗ್ರಹಿಸಿದ್ದಾರೆ.

ವರದಿ: ಸ್ವಾಮಿ ಬಳೇಪೇಟೆ

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ