
ಇದರ ಜೊತೆಗೆ ದಿನನಿತ್ಯ ಕಲ್ಲು ತುಂಬಿದ ಟಿಪ್ಪರ್ ಗಳು ಸಂಚಾರ ಮಾಡುವಾಗ ಕಲ್ಲುಗಳು ರಸ್ತೆ ಮೇಲೆ ಬೀಳುತ್ತಿರುವುದು, ಹಾಗೂ ವೇಗವಾಗಿ ಸಂಚಾರ ಮಾಡುವುದರಿಂದ ಮಕ್ಕಳಿಗೆ ಹಾಗೂ ದನಕರುಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಈ ಭಾಗದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆಯಂತೆ. ಆದ್ದರಿಂದ ಇಂದು ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಭೇಟಿಕೊಟ್ಟು ಜಕ್ಕನಾಯಕನಕೊಪ್ಪ ಗ್ರಾಮದ ಜನತೆಯ ಅಭಿಪ್ರಾಯ ಸಂಗ್ರಹ ಮಾಡಿ ಸಮಗ್ರವಾಗಿ ವರದಿ ತಯಾರಿಸಿ ಡಿ.ಎಚ್.ಡಿ ಕಂಪೆನಿಯವರನ್ನು ಸಂಪರ್ಕ ಮಾಡಿ ಈ ಸಮಸ್ಯೆಯ ಬಗ್ಗೆ ಚರ್ಚೆ ಮಾಡಿ ಇದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.
ವರದಿ: ಶ್ರೀ ಬಸವರಾಜು

