ಕಲಘಟಗಿ : ಪಟ್ಟಣದ ಹನ್ನೆರಡು ಮಠದ ಶ್ರೀ ಷ.ಬ್ರ ಅಭಿನವ ಮಡಿವಾಳ ಶಿವಾಚಾರ್ಯರು ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಳ್ಳಲಾದ ಇಷ್ಟಲಿಂಗ ಮಹಾ ಪೂಜಾ ಮತ್ತು ಪುರಾಣ ಮಂಗಲ ಕಾರ್ಯಕ್ರಮ ಶುಕ್ರವಾರ ಸಂಪನ್ನಗೊಳ್ಳಲಿದೆ.
ಹುಬ್ಬಳ್ಳಿಯ ಅಕ್ಕಿಹೊಂಡ ತೆಂಬದ ಓಣಿಯಲ್ಲಿರುವ ಹನ್ನೆರಡು ಮಠದಲ್ಲಿ ಕಲಘಟಗಿ ಹನ್ನೆರಡು ಮಠದ ಶ್ರೀ ಷ.ಬ್ರ ರೇವಣಸಿದ್ಧ ಶಿವಾಚಾರ್ಯರ ನೇತೃತ್ವದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಪರಿಯಂತ ಹಮ್ಮಿಕೊಳ್ಳಲಾದ ಇಷ್ಟಲಿಂಗ ಪೂಜಾ ಮತ್ತು ಶಿವಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದ ಮಹಾ ಮಂಗಲ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ರ ಶುಕ್ರವಾರ ದಂದು ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ಬೆಳೆಗ್ಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಮಹಾ ಮೂರ್ತಿಗೆ ಮಹಾ ರುದ್ರಾಭಿಷೇಕ, ಶ್ರೀ ಷ.ಬ್ರ ಅಭಿನವ ಮಡಿವಾಳ ಶಿವಾಚಾರ್ಯರ ಇಷ್ಟಲಿಂಗ ಪೂಜೆ, ಸಂಜೆ 7 ಘಂಟೆಗೆ ಹುಬ್ಬಳ್ಳಿಯ ಶ್ರೀ ಶ್ರೀ ಗುರುಮಾತೆ ವಿಜಯಾ ಬದ್ದಿ ಅವರಿಂದ ಶಿವಪುರಾಣ ಮಹಾ ಮಂಗಲ ಕಾರ್ಯಕ್ರಮ ನೆರವೇರುವುದು ಮದ್ಯಾಹ್ನ 1 ಘಂಟೆಗೆ ಮಹಾ ಪ್ರಸಾದ ಇರುತ್ತದೆ.


