ಬೀದರ : ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸತತವಾಗಿ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಈಶ್ವರ ಬಿ. ಖಂಡ್ರೆ ಅವರಿಗೆ ಬೆಂಗಳೂರಿನಲ್ಲಿ ವಿವಿಧ ಗಣ್ಯರು ಸನ್ಮಾನಿಸಿ ಶುಭಾಶಯ ಕೋರಿದರು.
ಹಲಬರ್ಗಾ ಶ್ರೀಮಠದ ಪೂಜ್ಯ ಹಾವಗಿಲಿಂಗ ಶಿವಾಚಾರ್ಯರು ಹಾಗೂ ಪೂಜ್ಯ ಗಂಗಾಧರ ಶಿವಾಚಾರ್ಯರು ಸೇರಿ ಸಚಿವರಿಗೆ ಆಶಿರ್ವಾದ ನೀಡಿದರು,
ಜೈ ಭಾರತ ಮಾತಾ ಸೇವಾ ಸಮಿತಿಯ ಭಾಲ್ಕಿ ತಾಲೂಕು ಅಧ್ಯಕ್ಷರಾದ ಪಪ್ಪು ಪಾಟೀಲ್ ಖಾನಾಪುರ್ ಹಾಗೂ ಆರ್. ಆರ್. ಪಾಟೀಲ್ ಅವರು ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಗೌರವಿಸಿದರು.
ಸತತ ಮೂರನೇ ಬಾರಿ ಸಚಿವರಾಗಿ ರಾಜ್ಯದ ಜನಸೇವೆಗೆ ಅವಕಾಶ ದೊರೆತಿರುವುದು ಬೀದರ ಜಿಲ್ಲೆಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಪೂಜ್ಯರು, ಗಣ್ಯರು ಅಭಿಪ್ರಾಯಪಟ್ಟರು. ಸಚಿವ ಈಶ್ವರ್ ಖಂಡ್ರೆ ಅವರ ನೇತೃತ್ವದಲ್ಲಿ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿ ಎಂದು ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿದ ಈಶ್ವರ್ ಖಂಡ್ರೆ ಅವರು ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದಕ್ಕೆ ಕೃತಜ್ಞತೆ ಸಲ್ಲಿಸಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ಪ್ರಾಮಾಣಿಕವಾಗಿ ಕೆಲಸ ಮಾಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
ವರದಿ :ಸಂತೋಷ ಬಿಜಿ ಪಾಟೀಲ

