LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಇಸ್ರೋ ಉದ್ಯೋಗ ವಂಚನೆ ಭೇದಿಸಿದ ಪೊಲೀಸರು : ವಿಜಯಪುರ ಮೂಲದ ಆರೋಪಿ ಬಂಧನ 

Advertisement

ಗದಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಕೊಡಿಸುವುದಾಗಿ ನಂಬಿಸಿ 30ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ಆಸಾಮಿಯನ್ನು ಗದಗ ಶಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಈರಣ್ಣ ಇನ್‌ಸ್ಟಾಗ್ರಾಂನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ, ತಾನು ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದ. ಕೆಲಸದ ಆಸೆಯಲ್ಲಿದ್ದ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು, ಜಾಬ್ ಆಫರ್ ನೀಡುವುದಾಗಿ ನಂಬಿಸಿ ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡು ವಂಚಿಸಿದ್ದಾನೆ. ಸಾಲ ತೀರಿಸಲು ಈ ವಂಚನೆಯ ಹಾದಿ ತುಳಿದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ಬಂಧಿತ ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಹಲವಾರು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಉದ್ಯೋಗದ ನೆಪದಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಆತನ ಬ್ಯಾಗ್‌ನಲ್ಲಿ ನಿರೋಧ್ ಪ್ಯಾಕೆಟ್‌ಗಳು ಪತ್ತೆಯಾಗಿರುವುದು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ಜಾಲದಲ್ಲಿ ಇನ್ನೆಷ್ಟು ಮಂದಿ ಭಾಗಿಯಾಗಿದ್ದಾರೆ ಹಾಗೂ ಯುವತಿಯರ ಶೋಷಣೆ ನಡೆದಿದೆಯೇ ಎಂಬ ಕೋನದಲ್ಲಿ ಗದಗ ಶಹರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್