Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.20 ತುರುವೇಕೆರೆಗೆ ಲಯನ್ಸ್ ಜಿಲ್ಲಾ ರಾಜ್ಯಪಾಲರ ಭೇಟಿ : ಪರಮೇಶ್ವರಯ್ಯ

Advertisement
ತುರುವೇಕೆರೆ : ಜನವರಿ 20 ರಂದು ತುರುವೇಕೆರೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ.ಜಿ.ಮೋಹನ್ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ವಿವಿಧ ಸೇವಾ ಚಟುಚಟಿಕೆ ಹಾಗೂ ನಿವೃತ್ತ ಸೇನಾಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹೆಚ್.ಎನ್. ಪರಮೇಶ್ವರಯ್ಯ ತಿಳಿಸಿದರು.

ಲಯನ್ಸ್ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸೇವೆಗೆ ಮತ್ತೊಂದು ಹೆಸರು ಎಂಬಂತೆ ಲಯನ್ಸ್ ಕ್ಲಬ್ ತುರುವೇಕೆರೆ ತಾಲೂಕಿನಲ್ಲಿ ನಿರಂತರ ಸೇವೆಯನ್ನು ಒದಗಿಸುತ್ತಾ ಬಂದಿದೆ. ಲಯನ್ಸ್ ಕ್ಲಬ್ 317 ಎ ಜಿಲ್ಲೆ ಜಿಲ್ಲಾ ರಾಜ್ಯಪಾಲರಾದ ಡಾ.ಜಿ. ಮೋಹನ್ ಅವರು ತಾಲೂಕಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತುರುವೇಕೆರೆ ಲಯನ್ಸ್ ಕ್ಲಬ್ ವತಿಯಿಂದ ವಿವಿಧ ಸೇವಾ ಚಟುವಟಿಕೆ ಹಾಗೂ ನಿವೃತ್ತ ಸೇನಾಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.


ಜನವರಿ 20 ರಂದು ಮಧ್ಯಾಹ್ನ 2 ಗಂಟೆಯಿಂದ ಕಲ್ಪತರು ಆಶ್ರಮಕ್ಕೆ ಆಹಾರ ಸಾಮಗ್ರಿ, ಹೊದಿಕೆ ವಿತರಣೆ, ವಿಶೇಷಚೇತನ ಕಲಾವಿದೆಗೆ ವಿದ್ಯುತ್ ಚಾಲಿತ ಗಾಲಿಕುರ್ಚಿ ವಿತರಣೆ, ಅತ್ತಿಕುಳ್ಳೆಪಾಳ್ಯ ದೇವಸ್ಥಾನದ ಬಳಿ ಕ್ಯಾನ್ಸರ್ ತಪಾಸಣಾ ಶಿಬಿರ, ಹೆಚ್.ಪಿ.ವಿ. ಲಸಿಕಾ ಕಾರ್ಯಕ್ರಮ, ತುರುವೇಕೆರೆಯ ಲಯನ್ಸ್ ತಂಗುದಾಣದಲ್ಲಿ ಮಾನವೀಯ ಗೋಡೆ ಉದ್ಘಾಟನೆ, ಲಯನ್ಸ್ ಪಾರ್ಕಿನಲ್ಲಿ ಪರಿಸರ ಸಂರಕ್ಷಣೆಗಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ವಿಶೇಷಚೇತನರಿಗೆ ಗಾಲಿಕುರ್ಚಿ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸರ್ಕಾರಿ ಆಸ್ಪತ್ರೆ ಟಿ.ಬಿ. ರೋಗಿಗಳಿಗೆ ಪೌಷ್ಟಿಕಾಂಶ ಆಹಾರ ಕಿಟ್ ವಿತರಣೆ, ಸರ್ಕಾರಿ ಶಾಲೆಗೆ ತಟ್ಟೆಲೋಟ ವಿತರಣೆ, ಅಶಕ್ತರಿಗೆ ಊರುಗೋಲು ವಿತರಣೆ ನಡೆಸಲಾಗುವುದು ಎಂದರು.



ಸಂಜೆ 7 ಗಂಟೆಗೆ ಲಯನ್ಸ್ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ 317 ಎ ಜಿಲ್ಲೆ ಜಿಲ್ಲಾ ರಾಜ್ಯಪಾಲರಾದ ಡಾ.ಜಿ. ಮೋಹನ್ ಉದ್ಘಾಟಿಸಲಿದ್ದು, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಹೆಲೆನ್ ಕೆಲೆನ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಿದ್ದಾರೆ. ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ ತುರುವೇಕೆರೆಯ ಕರ್ನಲ್ ರಾಮಚಂದ್ರ ಕೆ.ಎ. ಅವರನ್ನು ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಅಶೋಕ್ ಕೆ.ಕುಲಕರ್ಣಿ, ಖಜಾಂಚಿ ಎನ್.ಎಸ್.ನಾಗೇಶ್ವರರಾವ್, ಪ್ರಾಂತ್ಯಾಧ್ಯಕ್ಷ ರಾಜೇಶ್ ಎಸ್. ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆಂದರು.

ಗೋಷ್ಟಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎಂ. ಕುಮಾರಸ್ವಾಮಿ, ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಧನಪಾಲ್, ವಲಯಾಧ್ಯಕ್ಷ ರಂಗನಾಥ್, ಪದಾಧಿಕಾರಿಗಳಾದ ಗಂಗಾಧರ ದೇವರಮನೆ, ಸುಮಾಮಲ್ಲಿಕ್, ರುದ್ರಯ್ಯ ಹಿರೇಮಠ, ಪ್ರದೀಪ್, ಪರಮೇಶ್ವರಸ್ವಾಮಿ, ಸಚಿನ್, ಲೋಕೇಶ್ ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ