Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟೂ : ಒಡಿಶಾದಲ್ಲಿ ಆಕ್ರೋಶ

Advertisement
ಭುವನೇಶ್ವರ (ಮಾರ್ಚ್ 3): ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಹಚ್ಚೆ ಹಾಕಿಸಿಕೊಂಡ ಘಟನೆ ಒಡಿಶಾದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆ ಟ್ಯಾಟೂ ಚಿತ್ರಿಸಿದ ಕಲಾವಿದ ಮತ್ತು ಅವರ ಬಾಸ್ ಇಬ್ಬರನ್ನುಕೂಡ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭುವನೇಶ್ವರದ ಪಾರ್ಲರ್‌ನಲ್ಲಿ ಬಿಡಿಸಿದ ಟ್ಯಾಟೂವಿನ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಕೆಯ ದೇಹದ ಮೇಲೆ “ಅನುಚಿತ” ಸ್ಥಳದಲ್ಲಿ ದೇವರ ಆಕೃತಿಯನ್ನು ನೋಡಿ ಬೇಸರ ವ್ಯಕ್ತಪಡಿಸಿದ ಜಗನ್ನಾಥನ ಭಕ್ತರು ಪ್ರತಿಭಟನೆ ನಡೆಸಿದ್ದಾರೆ.

ಈ ವಿವಾದದ ನಂತರ, ಸರ್ಕಾರೇತರ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆ ಮತ್ತು ಹಚ್ಚೆ ಹಾಕಿಸಿಕೊಂಡ ಪಾರ್ಲರ್‌ನ ಮಾಲೀಕರು ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕ ಕ್ಷಮೆ ಯಾಚಿಸಿದ್ದಾರೆ.

ಭಾನುವಾರ ಸಂಜೆ ಕೆಲವು ಜಗನ್ನಾಥ ಭಕ್ತರು ಸಾಹಿದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಿಎನ್‌ಎಸ್ ಸೆಕ್ಷನ್ 299 (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿರುವ ವಿದೇಶಿ ಮಹಿಳೆ, ನಾನು ಯಾರಿಗೂ ಕಾಣದ ಜಾಗದಲ್ಲಿ ಜಗನ್ನಾಥನ ಟ್ಯಾಟೂ ಹಾಕೆಂದು ಹೇಳಿದೆ. ನಾನು ನಿಜವಾಗಿಯೂ ಜಗನ್ನಾಥ ಸ್ವಾಮಿಯ ಭಕ್ತೆ. ಇದು ಇಷ್ಟು ದೊಡ್ಡ ತಪ್ಪೆಂದು ನನಗೆ ಗೊತ್ತಿರಲಿಲ್ಲ. ನನ್ನನ್ನು ಕ್ಷಮಿಸಿ, ನಾನು ಈ ಟ್ಯಾಟೂವನ್ನು ತೆಗೆಸಿಕೊಳ್ಳುತ್ತೇನೆ ಎಂದು ಆಕೆ ಕೈ ಮುಗಿದು ಮನವಿ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ