LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೈಸ್ವಾಲ್ ಶತಕ, ಆಕಾಶ್ ದೀಪ್ ಅರ್ಧ ಶತಕ

Advertisement
----------------------------------------------------ಭಾರತ ತಂಡಕ್ಕೆ 287 ರನ್ ಗಳ ಮುನ್ನಡೆ

ಲಂಡನ್: ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕ (118) ಹಾಗೂ ಆಕಾಶ್ ದೀಪ್ ಅವರ ಚೊಚ್ಚಲ ಅರ್ಧ ಶತಕ ( 66) ನೆರವಿನಿಂದ ಭಾರತ ಕ್ರಿಕೆಟ್ ತಂಡವು ಇಲ್ಲಿ ನಡೆದಿರುವ ಐದನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಒಟ್ಟಾರೆ 287 ರನ್ ಮುನ್ನಡೆ ಪಡೆದಿದೆ.

ಕೆನಿಂಗ್ಟನ್ ಓವೆಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂದ್ಯದ ಮೂರನೇ ದಿನ ಚಹಾ ವಿರಾಮದ ನಂತರದ ಆಟದಲ್ಲಿ ಭಾರತ ತನ್ನ ದ್ವಿತೀಯ ಸರದಿಯಲ್ಲಿ 6 ವಿಕೆಟ್ ಗೆ 310 ರನ್ ಗಳಿಸಿದ್ದು, 287 ರನ್ ಗಳ ಮುನ್ನಡೆ ಪಡೆದು ಐದನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಿಂದ ಸಮ ಮಾಡಿಕೊಳ್ಳುವ ನಿಟ್ಟಿನಲ್ಲಿ ಉತ್ತಮ ಯತ್ನ ನಡೆಸಿದೆ.



---------------------------ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ (118)

ಎಡಗೈ ಆರಂಭ ಆಟಗಾರ ಜೈಸ್ವಾಲ್ 164 ಎಸೆತಗಳಲ್ಲಿ 14 ಬೌಂಡರಿ, 2 ಸಿಕ್ಸರ್ ನೆರವಿನಿಂದ 118 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಎರಡನೇ ದಿನದಾಂತ್ಯಕ್ಕೆ ರಾತ್ರಿ ಕಾವಲುಗಾರನಾಗಿ ಆಡಲು ಬಂದ ಆಕಾಶ್ ದೀಪ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ಚೊಚ್ಚಲ ಅರ್ಧ ಶತಕ ಸಿಡಿಸಿದರು. ಅವರು 94 ಎಸೆತಗಳನ್ನು ಎದುರಿಸಿ 12 ಬೌಂಡರಿಗಳನ್ನು ಸಿಡಿಸಿ ಶುಭಮಾನ್ ಗಿಲ್ ಪಾಳಯದಲ್ಲಿ ಹೊಸ ಹುರುಪು ಮೂಡಿಸಿದರು.

ಆದರೆ ನಾಯಕ ಶುಭಮಾನ್ ಗಿಲ್ (11) ಸಾಯಿ ಸುದರ್ಶನ್ (11) ಹಾಗೂ ಕೆ.ಎಲ್. ರಾಹುಲ್ (7) ನಿರಾಶೆ ಮೂಡಿಸಿದರು. ಕರುಣ್ ನಯ್ಯರ  17 ದೊಡ್ಡ ಮೊತ್ತ ಸಾಗುವ ಲಕ್ಷಣ ತೋರಿದ್ದರಾದರೂ ಅವರೇ ಮೊತ್ತದಲ್ಲಿ ವಿಕೆಟ್ ಚಲ್ಲಿದರು. ರವೀಂದ್ರ ಜಡೆಜಾ (33) ಹಾಗೂ ದ್ರುವ್ ಜುರೆಲ್ (32) ಕ್ರೀಸ್ ಬಳಿ ಇದ್ದರು.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ