Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳುಗಳ್ಳರ ವಿರುದ್ಧ ಸೂಕ್ತ ಕ್ರಮಕ್ಕೆ ಜಯ ಕರ್ನಾಟಕ ಆಗ್ರಹ

Advertisement
ಸೇಡಂ: ತಾಲೂಕಿನ ಬೀಜನಳ್ಳಿ ಹಾಗೂ ತೊಟ್ನಳ್ಳಿ ಗ್ರಾಮದಲ್ಲಿ ಕಾಗೀಣ ನದಿ ಹಾದುಹೋಗುತ್ತಿದ್ದು, ಈ ನದಿಯ ಪಕ್ಕದ ಗ್ರಾಮಗಳಾದ ಬೀಜನಳ್ಳಿ ಹಾಗೂ ತೊಟ್ನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವುದಕ್ಕೆ ಮೆಲಸೇತುವೆ ಕಾಮಗಾರಿ ನಡೆಯುತ್ತಿದ್ದು ಸದರಿ ಕಾಮಗಾರಿಯು ದೇವೇಂದ್ರಪ್ಪ ಎಂ ಬಿರಾದಾರ ಎಂಬ ಗುತ್ತಿಗೆದಾರಾರ ಹೆಸರಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ತೊಟ್ನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ಕಾಮಗಾರಿಗಾಗಿ ಅಕ್ರಮವಾಗಿ ಮರಳನ್ನು ಯಾವುದೇ ಪರವಾನಿಗೆ ಪಡೆಯದೆ ಮರಳನ್ನು ಹಗಲು ರಾತ್ರಿ ರಾಜಾರೋಷವಾಗಿ ಯಾರ ಭಯವಿಲ್ಲದೆ ಮರಳನ್ನು ಸಾಗಿಸುತ್ತಿದ್ದಾರೆ.



ಇದರಿಂದ ನದಿಯಲ್ಲಿ ಸಂಪೂರ್ಣ ಮರಳು ಖಾಲಿಯಾಗುತ್ತಿದ್ದಲ್ಲದೆ ಇವರು ಮರಳು ಸಾಗಿಸುವ ಸಲುವಾಗಿ ನದಿಯಲ್ಲಿ ತೆಗ್ಗನ್ನು ಹಗೆಯುವುದರಿಂದ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳ ಜೀವಕ್ಕೆ ತೊಂದರೆ ಉಂಟಾಗಿ ಜೀವ ಹೋಗುವ ಭಯವು ಇದೆ.

ಅಕ್ರಮ ಮರಳು ಸಾಗಿಸುತ್ತಿರುವ ದೇವೇಂದ್ರಪ್ಪ ಎಂ ಬಿರಾದಾರ ಅವರ ಅಕ್ರಮ ಮರಳು ಸಾಗಾಣಿಕೆ ತಡೆಯುವಲ್ಲಿ ಪೊಲೀಸ್ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಅಕ್ರಮ ಮರಳುಗಳ್ಳರು ರಾಜಾರೋಷವಾಗಿ ಮರಳನ್ನು ಹಿಟಾಚಿ ಮುಖಾಂತರ, ಟಿಪ್ಪರಗಳ ಮುಖಾಂತರ ಮರಳು ಸಾಗಿಸುವುದರಿಂದ ನದಿಯ ಅಂತರ್ಜಲ ಕುಸಿತಿದೆ. ನದಿಯಲ್ಲಿ ಅಂತರ್ಜಲ ಕುಸಿತ ಕಂಡು ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ನೀರಿನ ಅಭಾವ ಕಾಣಬಹುದಾಗಿದೆ.

ಆದ್ದರಿಂದ ಕೂಡಲೇ ಅದಿಕಾರಿಗಳು ಅಕ್ರಮವಾಗಿ ಮರಳು ಸಾಗಿಸುತ್ತಿರುವ ದೇವೇಂದ್ರಪ್ಪ ಎಂ ಬಿರಾದಾರ ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ಬೀಜನಳ್ಳಿ ಹಾಗೂ ತೊಟ್ನಳ್ಳಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆಯ ಚಟುವಟಿಕೆಗೆ ಕಡಿವಾಣ ಹಾಕಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷರಾದ ರವೀಂದ್ರ ನಾಯಕ ವರ ನೇತೃತ್ವದಲ್ಲಿ ಸೇಡಂ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ರಾಮು ಮೆಕಾನಿಕ, ಶರಣು ಬುಡಸಣಿ, ರವಿಕುಮಾರ್ ಉಡಗಿ, ನರೇಂದ್ರ ರೆಡ್ಡಿ, ನಾಗುದೋರೆ ಇದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ