ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ವಿಶ್ವರಾಜ ಮರಪಳ್ಳಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಪಿಡ್ಬ್ಲೂಡಿ ಕೋಟಾದಲ್ಲಿ ರಾಷ್ಟ್ರಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾನೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ. ಚಿನ್ಮಯ ಸಂತೋಷಕುಮಾರ 37ನೇ ರ್ಯಾಂಕ್, ಜಯಂತ ಬಿ.ಚವ್ಹಾಣ 56, ಸಾಯಿಪ್ರಸಾದ ಶಿವರಾಜ 70 ನೇ ರಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಶೈಕ್ಷಣಿಕ ನಿರ್ದೇಶಕ ಎಂ.ಶ್ರೀನಿವಾಸರೆಡ್ಡಿ, ರಾಘವೇಂದ್ರ ಪತ್ರಿ ಸೇರಿದಂತೆ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.
ವರದಿ: ಸಂತೋಷ ಬಿಜಿ ಪಾಟೀಲ

