Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಸ್ನೇಹಿ ಆಶ್ರಮಕ್ಕೆ 30 ಸಾವಿರ ಮೌಲ್ಯದ ದಿನಸಿ, ಔಷಧಿ ವಿತರಿಸಿದ ಇನ್ನರ್ ವೀಲ್ ಮಹಿಳೆಯರು

Advertisement
ತುರುವೇಕೆರೆ: ಪಟ್ಟಣದ ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪದ ಮಹಿಳಾಮಣಿಗಳು ನೆಲಮಂಗಲ ಸೊಂಡೆಕೊಪ್ಪದ ಜನಸ್ನೇಹಿ ಆಶ್ರಮಕ್ಕೆ ಸುಮಾರು 30 ಸಾವಿರಕ್ಕೂ ಅಧಿಕ ಮೌಲ್ಯದ ಔಷಧಿ, ಮಾತ್ರೆಗಳು ಹಾಗೂ ಅಗತ್ಯ ದಿನಸಿ ಪದಾರ್ಥಗಳನ್ನು ವಿತರಿಸಿದರು.

ಬೆಂಗಳೂರಿನಲ್ಲಿ ನಡೆದ ಇಂಟರ್ಸಿಟಿ ಮೀಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ನೆಲಮಂಗಲ ಸೊಂಡೆಕೊಪ್ಪದ ಜನಸ್ನೇಹಿ ಆಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ಅನಾಥ ಹಾಗೂ ನಿರ್ಗತಿಕ, ನಿರಾಶ್ರಿತ ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸಿ ನೋಡಿಕೊಳ್ಳುತ್ತಿರುವ ಆಶ್ರಮದ ಮುಖ್ಯಸ್ಥ ಯೋಗೇಶ್ ಅವರೊಂದಿಗೆ ಚರ್ಚಿಸಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು, ಆಶ್ರಮಕ್ಕೆ ಅಗತ್ಯವಿರುವ ಅಕ್ಕಿ, ತೆಂಗಿನಕಾಯಿ, ದಿನಸಿ ಪದಾರ್ಥಗಳು, ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರಥಮ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಮಾತ್ರೆ, ಔಷಧಿ, ಬಿಸ್ಕೆಟ್, ಪಂಚೆ, ಬಟ್ಟೆಗಳನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಕ್ಲಬ್ ಸದಸ್ಯೆ ಆನಂದಮದನ್ ಅವರ ಜನ್ಮದಿನವನ್ನು ಮಕ್ಕಳೊಂದಿಗೆ ಆಚರಿಸಿ ಮಕ್ಕಳಿಗೆ ಸಿಹಿ ಹಂಚಲಾಯಿತು.

ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪದ ಅಧ್ಯಕ್ಷೆ ನೇತ್ರಾ ಸಿದ್ದಲಿಂಗಸ್ವಾಮಿ, ಸಂಸ್ಥಾಪಕ ಅಧ್ಯಕ್ಷೆ ಗೀತಾಸುರೇಶ್, ಕಾರ್ಯದರ್ಶಿ ಆನಂದಜಲ, ಸದಸ್ಯರಾದ ಡಾ.ಆಶಾಚೌದ್ರಿ, ಲಲಿತಾಪ್ರಕಾಶ್, ಪದ್ಮನಟರಾಜ್, ಮಮತಾಅಶೋಕ್, ದಿವ್ಯ, ಆನಂದಮದನ್, ಸುವರ್ಣಮ್ಮ, ವೀಣಾಮಂಜುನಾಥ್ ಸೇರಿದಂತೆ ಹಲವರು ಆಶ್ರಮಕ್ಕೆ ಭೇಟಿ ನೀಡಿ, ನೆರವು ನೀಡಿದರು.

ವರದಿ: ಗಿರೀಶ್ ಕೆ ಭಟ್, 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ