LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜುಲೈ.12ಕ್ಕೆ ಲೋಕಾ ಅದಾಲತ್, ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಧೀಶರ ಸಲಹೆ

Advertisement
ಸಿರುಗುಪ್ಪ : ನಗರದ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಅಶೋಕ್.ಆರ್.ಹೆಚ್, ಅವರು ಜುಲೈ ತಿಂಗಳ 12ನೇ ತಾರೀಖಿನಂದು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯುವ ಬಗ್ಗೆ ಪತ್ರಿಕಾಗೊಷ್ಠಿ ನಡೆಸಿದರು.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರೀಯ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಹಳ ವರ್ಷಗಳಿಂದ ಬಾಕಿ ಉಳಿದ ವ್ಯಾಜ್ಯಗಳನ್ನು ಅಂದರೆ ಬಗೆಹರಿಸಿಕೊಳ್ಳಬೇಕಾದ ಪ್ರಕರಣಗಳನ್ನು ಲೋಕಾ ಅದಾಲತ್‌ನಲ್ಲಿ ರಾಜಿ ಅಥವಾ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ಅಂದರೆ ಗಂಡ ಹೆಂಡತಿ, ಸಹೋದರರು, ಸಂಬಂಧಿಕರ ನಡುವಿನ ವ್ಯಾಜ್ಯಗಳನ್ನು ಎರಡು ಪಕ್ಷದಿಂದ ಒಪ್ಪಿದಲ್ಲಿ ಮಾತ್ರ ರಾಜಿ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ನುರಿತ ಕಾನೂನು ಸಲಹೆಗಾರರ ಮೂಲಕ ವಿಚಾರಣೆ ನಡೆಸಲಾಗುತ್ತದೆ.

ಸಂಧಾನದಿಂದ ಇತ್ಯರ್ಥಪಡಿಸಿಕೊಳ್ಳುವುದರಿಂದ ಸಂಬಂಧಗಳು, ಸ್ನೇಹ, ಪ್ರೀತಿಯು ಗಟ್ಟಿಗೊಳ್ಳುತ್ತದೆ.

ವ್ಯಾಜ್ಯಗಳು ಶೀಘ್ರದಲ್ಲಿ ಇತ್ಯರ್ಥಗೊಳ್ಳುವುದರಿಂದ ಕಕ್ಷಿದಾರರ ಸಮಯವೂ ಉಳಿಯುತ್ತದೆ.

ಆದ್ದರಿಂದ ನ್ಯಾಯಾಲಯದಲ್ಲಿ ವ್ಯಾಜ್ಯಗಳಿರುವವರು ಸಂಬಂಧಪಟ್ಟ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ.

ಆದಕಾರಣ ಎಲ್ಲಾ ಪತ್ರಿಕಾ ಮಾದ್ಯಮಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಪ್ರಚುರಪಡಿಸಬೇಕೆಂದು ತಿಳಿಸಿದರು.

ಇದೇ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ್ ವೆಂಕೋಬ, ಕಾರ್ಯದರ್ಶಿ ಶಿವಕುಮಾರಸ್ವಾಮಿ ಹಾಗೂ ವಕೀಲರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ