Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಾಧೀಶರು ಹಿಂದಿನ ಕಾಲದ ಮೊಘಲರ ರೀತಿ ವರ್ತಿಸುಬಾರದು : ಹೈಕೋರ್ಟ್ 

Advertisement
ಬೆಂಗಳೂರು: ನ್ಯಾಯಾಧೀಶರು ಹಿಂದಿನ ಕಾಲದ ಮೊಘಲರ ರೀತಿ ವರ್ತಿಸುಬಾರದು, ನ್ಯಾಯದಾನದ ಹೆಸರಲ್ಲಿ ಕಾನೂನು ವ್ಯಾಪ್ತಿ ಮೀರಬಾರದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಧೀಶರು ಮೊಘಲರಂತೆ ವರ್ತಿಸುವಂತಿಲ್ಲ, ಕಾನೂನು ವ್ಯಾಪ್ತಿ ಮೀರಿ ನ್ಯಾಯಾಲಯದ ಆದೇಶ ಹೊರಡಿಸಬಾರದು ಎಂದು ಹೇಳಿದೆ.

ಕಾನೂನಿನಡಿ 12 ವರ್ಷ ಮಾತ್ರ ಅಂಗಡಿ ಗುತ್ತಿಗೆ ನವೀಕರಿಸಲು ಅವಕಾಶವಿದ್ದರೂ 20 ವರ್ಷ ವಿಸ್ತರಿಸಲು ನಿರ್ಧರಿಸಿರುವುದು ಕಾನೂನುಬಾಹಿರವಾಗಿದೆ ಎಂದು ಹೇಳಿದ ಹೈಕೋರ್ಟ್ ವಿಭಾಗೀಯ ಪೀಠವು ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಚನ್ನಪಟ್ಟಣ ಪುರಸಭೆ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ.

ವಿಶೇಷ ಚೇತನರ ಕಾಯ್ದೆಯಡಿ ಗುತ್ತಿಗೆಯನ್ನು ಸಿದ್ದರಾಮು ಎಂಬುವರಿಗೆ ನಿರ್ದಿಷ್ಟ ಆಧಾರದ ಮೇಲೆ ನೀಡಿರುವುದನ್ನು ನ್ಯಾಯಪೀಠ ಗಮನಿಸಿದೆ. ಈ ಕುರಿತು 2009 ರ ಸುತ್ತೋಲೆಯಲ್ಲಿ ಗುತ್ತಿಗೆಯ ಅವಧಿ ಗರಿಷ್ಠ 12 ವರ್ಷ ಮಾತ್ರ ನವೀಕರಿಸಲು ಅವಕಾಶವಿದೆ ಎಂದು ಸರ್ಕಾರ ತಿಳಿಸಿದೆ. ಹಂಚಿಕೆಯನ್ನು ಅನುವಂಶೀಯವಾಗಿ ಪರಿಗಣಿಸಲಾಗುವುದಿಲ್ಲ. ಹಂಚಿಕೆದಾರನ ಮರಣದ ನಂತರ ಗುತ್ತಿಗೆ ಕೊನೆಯಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣ ಸಂಬಂಧ ಏಕ ಸದಸ್ಯ ಪೀಠದ ಆದೇಶ ಉಲ್ಲಂಘಿಸಿದ ನ್ಯಾಯಪೀಠ, ನ್ಯಾಯಾಧೀಶರು ಮೊಘಲರಂತೆ ವರ್ತಿಸುವಂತಿಲ್ಲ. ಕಾನೂನು ವ್ಯಾಪ್ತಿ ಮೀರಿ ನ್ಯಾಯಾಲಯ ಆದೇಶ ಹೊರಡಿಸಬಾರದು. ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಕಾನೂನು ಬದ್ಧ ಆದೇಶ ನೀಡಬೇಕಾಗುತ್ತದೆ. ನ್ಯಾಯ ಒದಗಿಸುವ ನೆಪದಲ್ಲಿ ಕಾನೂನು ಮೀರಿ ಅಧಿಕಾರ ಚಲಾಯಿಸುವಂತಿಲ್ಲ ಎಂದು ವಿಭಾಗೀಯ ಪೀಠ ತಿಳಿಸಿದೆ. ಪತಿ ಕಳೆದುಕೊಂಡ ಪತ್ನಿ ಕುರಿತು ಅನುಕಂಪ ವ್ಯಕ್ತಪಡಿಸಿದ ನ್ಯಾಯಪೀಠ, ತನ್ನ ವ್ಯವಹಾರವನ್ನು ಬೇರೆ ಸ್ಥಳಕ್ಕೆ ಸ್ಥಳಾಂತರ ಮಾಡಲು ಕಾಲಾವಕಾಶ ನೀಡುವಂತೆ ಪುರಸಭೆಗೆ ನಿರ್ದೇಶನ ನೀಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ