Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷ ಮತ್ತು ಎಂ ಡಿ ಅವರನ್ನು ಭೇಟಿಯಾದ : ಕೆ ಮಹಾಂತೇಶ

Advertisement
ಲಿಂಗಸ್ಗೂರು : ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಮಹಾಂತೇಶ ಇಂದು ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿಯ ಕೇಂದ್ರ ಕಚೇರಿಯಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರು ಜಿ.ಟಿ.ಪಾಟೀಲ್ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಆರ್. ಶಿಲ್ಪಾ ಅವರನ್ನು ಮೊದಲ ಬಾರಿಗೆ ಭೇಟಿ ಮಾಡುವ ಮೂಲಕ ಅಭಿನಂದನೆ

ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕರೊಂದಿಗಿನ ಈ ಸೌಹಾರ್ದ ಮಾತುಕತೆಯಲ್ಲಿ ಕಂಪನಿಯ ಚಿನ್ನ ಉತ್ಪಾದನೆ ಹೆಚ್ಚಳ ಹಾಗೂ ಸಿಬ್ಬಂದಿ ಮತ್ತು ಕಾರ್ಮಿಕರ ಬಹುಮುಖ್ಯ ಬೇಡಿಕೆಗಳಾದ ಮೆಡಿಕಲ್ ಅನ್ ಫಿಟ್, ಖಾಲಿ ಹುದ್ದೆಗಳ ಭರ್ತಿ, ಬಾಕಿಯಿರುವ ಮನೆ ಬಾಡಿಗೆ ಭತ್ಯೆ, ಕ್ಯಾಂಟೀನ್ ಸೇರಿದಂತೆ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರು ಅನೇಕ ಸೌಕರ್ಯಗಳನ್ನು ಒದಗಿಸಬೇಕು. 1000 ಮನೆಗಳ ನಿರ್ಮಾಣ ಹಾಗೂ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಯೋಜನೆ ಜಾರಿಗಾಗಿ ತ್ವರಿತಗತಿಯ ಕ್ರಮಗಳನ್ನು ವಹಿಸಬೇಕೆಂದು

ಅಧ್ಯಕ್ಷರು ಪ್ರಸ್ತಾಪಿಸಿದ ವೀಶೇಷವಾಗಿ ಮೆಡಿಕಲ್ ಅನ್ ಫಿಟ್, ಹೆಚ್ ಆರ್ ಎ.ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಸಕರಾತ್ಮಕವಾಗಿ ಸ್ಪಂದನೆ ನೀಡಿದರು. ಖಾಲಿ ಭರ್ತಿ ಹಾಗೂ ಬಡ್ತಿ ವಿಚಾರಕ್ಕೆ ಸಂಬಂಧಿಸಿ ಸರ್ಕಾರ ಒಳ ಮೀಸಲಾತಿ ಕುರಿತು ಕ್ರಮವಹಸಿದ ಬಳಿಕ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು ಎನ್ನಲಾಗುತ್ತಿದೆ.

ಇದಲ್ಲದೇ ಕಾರ್ಮಿಕ ಸಂಘವು ಮಂಡಿಸಿರುವ ಹಲವು ಬೇಡಿಕೆಗಳು ಮತ್ತು ಕಂಪನಿಯ ಉತ್ಪಾದಕತೆ ಗುರಿಯನ್ನು ತಲುಪುವುದು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚುನಾಯಿತ ಕಾರ್ಮಿಕ ಸಂಘದೊಂದಿಗೆ ಜೊತೆ ಜುಲೈ 9 ರಂದು ಹಟ್ಟಿಗೆ ಭೇಟಿ ನೀಡಿ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು ಎನ್ನಲಾಗುತ್ತಿದೆ
ಈ ಸಂದರ್ಭದಲ್ಲಿ ಸಿಐಟಿಯು ಮುಖಂಡ ರಮೇಶ ವೀರಾಪೂರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ