Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ಉತ್ಸವ ತಹಶೀಲ್ದಾರರಿಂದ ರಾಷ್ಟ್ರ ಧ್ವಜಾರೋಹಣ.

Advertisement
ಸಿರುಗುಪ್ಪ :- ನಗರದ ತಹಶೀಲ್ದಾರ್ ಕಛೇರಿಯ ಆವರಣದಲ್ಲಿ ತಾಲೂಕಾಡಳಿತದಿಂದ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ, ತಹಶೀಲ್ದಾರ್ ಹೆಚ್.ವಿಶ್ವನಾಥ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.



ನಂತರ ಮಾತನಾಡಿ 1947 ಅಗಸ್ಟ್ 15 ರಂದು ಬ್ರಿಟೀಷರಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಭಾರತದ ಗಣರಾಜ್ಯದಲ್ಲಿ ಸೇರದೇ ಉಳಿದಿದ್ದ ಹೈದ್ರಾಬಾದ್ ಪ್ರಾಂತ್ಯಕ್ಕೆ ಮಾತ್ರ ನಿಜಾಮರ ಕಪಿ ಮುಷ್ಟಿಯಿಂದ ನಮಗೆ ಮುಕ್ತಿ ದೊರೆತಿರಲಿಲ್ಲ.

ಹೈದ್ರಾಬಾದ್ ಕರ್ನಾಟಕದಲ್ಲಿದ್ದ ಅಂದಿನ ಆರು ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಬಳ್ಳಾರಿ ಜಿಲ್ಲೆಗಳಿಗೆ 13 ತಿಂಗಳು 2 ದಿನಗಳ ನಂತರ ಕಲ್ಯಾಣ ಕರ್ನಾಟಕಕ್ಕೆ ಉಕ್ಕಿನ ಮನುಷ್ಯನೆಂದೇ ಪ್ರಖ್ಯಾತಿಯಾಗಿದ್ದ ಸರ್ದಾರ್ ವಲಭಬಾಯ್ ಪಟೇಲರ ದಿಟ್ಟ ನಿರ್ಧಾರದಿಂದ ಸ್ವಾತಂತ್ರ್ಯ ದೊರಕಿದೆ.

ಸ್ವತಂತ್ರ ಭಾರತದ ನಂತರ ಹಲವು ಅರಸರ ಆಳ್ವಿಕೆಯ ಹಲವು ಸಂಸ್ಥಾನಗಳು ಭಾರತದ ಗಣತಂತ್ರದಲ್ಲಿ ವಿಲೀನವಾದರೆ ಕೆಲವು ಸಂಸ್ಥಾನಗಳು ಸ್ವತಂತ್ರವಾಗಿ ನಿರಂಕುಶ ಪ್ರಭುತ್ವ ಮುಂದುವರೆಸಿದ್ದು, ಅದರಲ್ಲಿ ಹೈದ್ರಬಾದ್ ನಿಜಾಮರ ಸಂಸ್ಥಾನವು ಒಂದಾಗಿತ್ತು.

ಕಾಲಾನಂತರ ನಿಜಾಮರ ದಬ್ಬಾಳಿಕೆ ವಿರುದ್ದ ರಮಾನಂದ ತೀರ್ಥರ ನೇತೃತ್ವದಲ್ಲಿ ಆರಂಭವಾದ ಹೋರಾಟದಲ್ಲಿ ಭಾರತದಲ್ಲಿ ವಿಲೀನತೆಯ ಕೂಗು ಈ ಪ್ರದೇಶದಲ್ಲಿ ಕೇಳಿಬರುತ್ತದೆ. ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ, ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆಗಳು ಜರುಗುತ್ತವೆ.

ಹೋರಾಟಗಾರರು ಪ್ರಾಣದ ಹಂಗು ತೊರೆದು ಇನ್ನಿತರರು ಹೋರಾಟಕ್ಕೆ ಮುಂದಾಗಿ ಭಾರತ ಸರ್ಕಾರದ ಸಹಾಯ ಕೇಳಿದಾಗ ನಿಜಾಮನಾಗಿದ್ದ ಮೀರ್ ಉಸ್ಮಾನ್ ಅಲಿಖಾನ್ ರಜಾಕ್ ಎನ್ನುವ ಖಾಸಗಿ ಸೈನ್ಯದ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಾನೆ.

ಸೆಪ್ಟಂಬರ್ 13, 1948 ಅಂದಿನ ಗೃಹಸಚಿವರಾಗಿದ್ದ ಪಟೇಲರು ಪೋಲೋ ಎನ್ನುವ ಕಾರ್ಯಾಚರಣೆ ನಡೆಸಿ ಹೈದ್ರಾಬಾದ್ ಪ್ರಾಂತ್ಯದಿಂದ ಸೆ.17. 1947ರಂದು ವಿಮೋಚನೆಗೊಳಿಸಿ ಸ್ವತಂತ್ರ ದೊರೆಕಿಸಿದ್ದು ಅಂದಿನಿದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕಲ್ಯಾಣ ಕರ್ನಾಟಕ ಉತ್ಸವವನ್ನಾಗಿ ಆಚರಿಸಲಾಗುತ್ತಿದೆಂದು ತಿಳಿಸಿದರು.

ಇದೇ ವೇಳೆ ನಗರಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ, ಉಪಾಧ್ಯಕ್ಷೆ ಕೆ.ಯಶೋದಾ ಮೂರ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಹಾಜರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ